spot_img

ಕೆಎಂಇಎಸ್ ಶಿಕ್ಷಣ ಸಂಸ್ಥೆಯಲ್ಲಿ ‘KIDS FEST’ ಹಾಗೂ UKG Graduation Day ಕಾರ್ಯಕ್ರಮದ ಸಂಭ್ರಮಾಚರಣೆ

Date:

spot_img

ಕಾರ್ಕಳ : ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ 05-04-2025 ನೇ ಶನಿವಾರದಂದು ಪೂರ್ವ ಪ್ರಾಥಮಿಕದ ಮಕ್ಕಳಿಂದ 1ನೇ ತರಗತಿವರೆಗಿನ ಮಕ್ಕಳಿಗೆ KIDS FEST ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಗೂ UKG ಮಕ್ಕಳಿಗೆ “Graduation day” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಲೆಯ ಹಳೆ ವಿದ್ಯಾರ್ಥಿಯಾದ Dn Valesh Prajwal Aranha ಇವರು “ಸಾಂಸ್ಕೃತಿಕ ಚಟುವಟಿಕೆ ಮೂಲಕ ಶೈಕ್ಷಣಿಕ ಜ್ಞಾನವನ್ನು ಸಂಪಾದಿಸಬಹುದು” ಎಂದು ಹೇಳಿದರು.

ಮತ್ತೋರ್ವ ಅತಿಥಿಯಾದ ಶ್ರೀಮತಿ ಮೀನಾಕ್ಷಿ ಭಟ್ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ” ಮಕ್ಕಳಲ್ಲಿ ಈಗಾಗಲೇ ಅಡಗಿರುವ ದಿವ್ಯ ಪರಿಪೂರ್ಣತೆಯನ್ನು ಹೊರಗೆಳೆಯುವುದೇ ಶಿಕ್ಷಣ ಎಂಬಂತೆ , ಈ ಶಾಲೆಯಲ್ಲಿ ಚಿಕ್ಕ ಮಕ್ಕಳಿಂದಲೇ ವಿವಿಧ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ” ಎಂದು ಹೇಳಿದರು.

ಅಂತೆಯೇ ಮತ್ತೋರ್ವ ಅತಿಥಿಯಾದ ಇಕ್ಬಾಲ್ ಇವರು ಮಕ್ಕಳನ್ನು ಸಾಧ್ಯವಾದಷ್ಟು ಸಾಮಾಜಿಕ ಪಿಡುಗುಗಳಿಗೆ ಒಳಗಾಗದಂತೆ ಮಕ್ಕಳಲ್ಲಿ ಶಿಕ್ಷಣದ ಅರಿವು ಮೂಡಿಸಬೇಕು ಎಂದು ನುಡಿದರು.

ಈ ಸಮಾರಂಭದಲ್ಲಿ ಶಾಲೆಯ ಅಧ್ಯಕ್ಷರಾದ ಕೆ ಎಸ್ ಇಮ್ತಿಯಾಜ್ ಅಹಮದ್, ಪ್ರಾಂಶುಪಾಲರಾದ ಶ್ರೀಮತಿ ಪಾಟ್ಕರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಲೊಲಿಟ.ಡಿಸಿಲ್ವ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರೋಗ್ಯಕ್ಕೆ ಮಾರಕವಾಗಬಲ್ಲ ದಿನನಿತ್ಯದ ಸೊಪ್ಪು: ಕಿಡ್ನಿ ಕಲ್ಲುಗಳ ಸೃಷ್ಟಿಗೆ ಪ್ರಮುಖ ಕಾರಣ!

ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾದ ಮೂತ್ರಪಿಂಡಗಳು, ರಕ್ತವನ್ನು ಶುದ್ಧೀಕರಿಸಿ ವಿಷಕಾರಿ ಅಂಶಗಳನ್ನು ಹೊರಹಾಕುವ ಕಾರ್ಯವನ್ನು ನಿರಂತರವಾಗಿ ಮಾಡುತ್ತವೆ.

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಉಡುಪಿಯಲ್ಲಿ ವರುಣನ ಆರ್ಭಟ: ಆಸ್ತಿಪಾಸ್ತಿಗೆ ಹಾನಿ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ

ಹರಿದ್ವಾರದಲ್ಲಿ ದುರಂತ: ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸಾ ದೇವಿ ದೇವಾಲಯದಲ್ಲಿ ಭಾನುವಾರ (ಜುಲೈ 27) ಸಂಭವಿಸಿದ ದುರದೃಷ್ಟಕರ ಕಾಲ್ತುಳಿತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ