spot_img

ಸೊಳ್ಳೆ ಓಡಿಸಲು ಕಾಯಿಲ್ ಬಳಸುವ ಮುನ್ನ ಈ ಅಪಾಯಗಳನ್ನು ತಿಳಿದುಕೊಳ್ಳಿ!

Date:

ಬೆಂಗಳೂರು: ಮಳೆಗಾಲ, ಬೇಸಿಗೆ ಎಲ್ಲ ಕಾಲದಲ್ಲೂ ಸೊಳ್ಳೆ ಕಾಟ ಎಲ್ಲರಿಗೂ ತಲೆನೋವು. ಮನೆಯೊಳಗೆ ಸೊಳ್ಳೆ ನಿಯಂತ್ರಿಸಲು ಹೆಚ್ಚಿನವರು ಸೊಳ್ಳೆ ಕಾಯಿಲ್ ಬಳಸುತ್ತಾರೆ. ಆದರೆ ಈ ಕಾಯಿಲ್ ನಿಂದ ಉಂಟಾಗುವ ಹೊಗೆ ಆರೋಗ್ಯಕ್ಕೆ ಹಾನಿಕಾರಕ ಎಂದು ತಜ್ಞರು ಎಚ್ಚರಿಸಿದ್ದಾರೆ.

ಆರೋಗ್ಯದ ಮೇಲೆ ಪರಿಣಾಮ:
ಸೊಳ್ಳೆ ಕಾಯಿಲ್ ಬಳಸದಂತೆ ತಜ್ಞರು ಎಚ್ಚರಿಸುತ್ತಿರುವ ಪ್ರಮುಖ ಕಾರಣವೆಂದರೆ, ಇದರಲ್ಲಿ ಬಳಸುವ ರಾಸಾಯನಿಕಗಳು ಹಾನಿಕಾರಕ. ಈ ಕಾಯಿಲ್ ಉರಿದಾಗ ಹೊರಸೂಸುವ ಹೊಗೆ, ಸಿಗರೇಟ್ ಹೊಗೆಗಿಂತಲೂ ಅಪಾಯಕಾರಿ ಎಂದು ಸಂಶೋಧನೆಗಳು ಸೂಚಿಸುತ್ತವೆ. ಇದು ಶ್ವಾಸಕೋಶದ ಸೋಂಕು, ಅಸ್ತಮಾ, ತಲೆನೋವು, ಅಲರ್ಜಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಮಕ್ಕಳ ಆರೋಗ್ಯಕ್ಕೆ ತೀವ್ರ ಅಪಾಯ:
ಮಕ್ಕಳಿಗೆ ಈ ಹೊಗೆ ಹೆಚ್ಚು ಪರಿಣಾಮ ಬೀರುತ್ತದೆ. ಶ್ವಾಸಕೋಶದ ಸಮಸ್ಯೆಗಳಾದ ಅಸ್ತಮಾ, ಉಸಿರಾಟದ ತೊಂದರೆ, ತಲೆನೋವು ಹೆಚ್ಚಾಗುವ ಸಾಧ್ಯತೆಯಿದೆ. ಜೊತೆಗೆ, ಚರ್ಮದ ಅಲರ್ಜಿ, ಕಣ್ಣೀರಿನ ಸಮಸ್ಯೆ, ತೂಕಡಿಸು, ನಿದ್ರಾಹೀನತೆ ಉಂಟಾಗಬಹುದು.

ಆರೋಗ್ಯ ತಜ್ಞರ ಪ್ರಕಾರ, ಸೊಳ್ಳೆ ತೊಡೆದುಹಾಕಲು ನೈಸರ್ಗಿಕ ವಿಧಾನಗಳು ಉತ್ತಮ.
✅ ಸೊಳ್ಳೆ ಪರದೆ ಬಳಸಿ
✅ ನೀರು ನಿಲ್ಲದಂತೆ ನೋಡಿಕೊಳ್ಳಿ
✅ ಸೊಳ್ಳೆ ನಿಯಂತ್ರಣಕ್ಕೆ ಮಚ್ಚೆದೀಪ, ಲವಂಗದ ದೀಪ ಬೆಳಗುವುದು ಉತ್ತಮ

ನಿಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಿ, ಸೊಳ್ಳೆ ಕಾಯಿಲ್ ಬಳಕೆ ತಪ್ಪಿಸಿ!

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.