spot_img

ಆಗಸ್ಟ್ 9ರಂದು ಕೃಷ್ಣಮಠದ ನೂತನ ‘ಯಾಳಿ’ ಲೋಕಾರ್ಪಣೆ

Date:

spot_img

ಉಡುಪಿ: ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು ಸುಮಾರು ಒಂದು‌ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಕನಕ ಗೋಪುರಕ್ಕೆ ಹೊಂದಿಕೊಂಡಿರುವ ಚಂದ್ರಶಾಲೆ ಸಹಿತ ಮಧ್ವ ಸರೋವರದ ವರೆಗೆ ಶ್ರೀಕೃಷ್ಣ ಆಲಯದ ಮೇಲ್ಛಾವಣಿಗೆ ಪ್ರಾಚೀನ ವಾಸ್ತುಶೈಲಿಯ ರೂಪ ನೀಡಲಾಗಿದೆ. ಆ ಮೂಲಕ ಕೃಷ್ಣಮಠದ ದಿವ್ಯ ಸೌಂದರ್ಯವನ್ನು ಭವ್ಯಗೊಳಿಸಲಾಗಿದೆ.

ನೂತನ ಯಾಳಿಯನ್ನು ಹೊಸ್ತಿಲ ಹುಣ್ಣಿಮೆಯ ಪರ್ವದಿನದಂದು ಆ.9ರಂದು ಬೆಳಿಗ್ಗೆ ಮಹಾಪೂಜೆಯ ಬಳಿಕ 10 ಗಂಟೆಗೆ ರಾಜ್ಯಸಭಾ ಸದಸ್ಯೆ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸುವರು. ಬಳಿಕ ರಾಜಾಂಗಣದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿರುವರು. ಇನ್ಫೋಸಿಸ್ ಫೌಂಡೇಶನ್ ಪ್ರವರ್ತಕರಾದ ಶ್ರೀಮತಿ ಸುಧಾ ಮೂರ್ತಿ ಮತ್ತು ನಿವೃತ್ತ ಮುಖ್ಯ ನ್ಯಾಯಾಧೀಶ ಶ್ರೀ ದಿನೇಶ್ ಕುಮಾರ್ ರವರು ಅಭ್ಯಾಗತರಾಗಿ ಆಗಮಿಸುವರು.

ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸುವರು ಎಂದು ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಕಾರ್ಯದರ್ಶಿ ಪ್ರಸನ್ನಾಚಾರ್ಯ ತಿಳಿಸಿದ್ದಾರೆ.

ಮಹಿಳಾ ವಿದ್ಯಾಪೀಠ ದ ಶುಭಾರಂಭ

ಮಹಿಳೆಯರಲ್ಲೂ ಧಾರ್ಮಿಕ, ಸಾಂಸ್ಕೃತಿಕ ಪ್ರಜ್ಞೆ ಉದ್ದೀಪನಗೊಳಿಸಿ ಅವರನ್ನೂ ತೊಡಗಿಸಿಕೊಳ್ಳುವ ಆಶಯದಿಂದ ಪುತ್ತಿಗೆ ಮಠದಿಂದ ಆರಂಭಿಸಲಾಗುವ ಮಹಿಳಾ ವಿದ್ಯಾಪೀಠಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸುಧಾ ಮೂರ್ತಿ ಇದೇ ಸಂದರ್ಭದಲ್ಲಿ ಗೀತಾ ಮಂದಿರದಲ್ಲಿ ಚಾಲನೆ ನೀಡುವರು. ಬಿಡುವಿನ ವೇಳೆಯಲ್ಲಿ ‌ಮಹಿಳೆಯರಿಗೆ ಲಕ್ಷ್ಮೀಶೋಭಾನೆ, ಭಗವದ್ಗೀತೆ, ವಿವಿಧ ಶ್ಲೋಕಗಳನ್ನು ಮಾತ್ರವಲ್ಲದೇ ರಂಗೋಲಿ, ಹೂಕಟ್ಟುವುದು, ಬತ್ತಿ ಹೊಸೆಯುವುದು ಇತ್ಯಾದಿ ಧಾರ್ಮಿಕ ಚಟುವಟಿಕೆಗಳನ್ನು ಮಹಿಳಾ ವಿದ್ಯಾಪೀಠದಲ್ಲಿ ಅನುಭವಿ‌ ಮಹಿಳೆಯರು ತಿಳಿಸಿಕೊಡುವರು ಎಂದು ಪರ್ಯಾಯ ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವೃತ್ತಿಪರ ಇಂಜಿನಿಯರ್ಗಳ ದಿನ

ಈ ದಿನವನ್ನು ಇಂಜಿನಿಯರ್ಗಳ ಅನ್ವೇಷಣೆ, ಸಾಧನೆ ಮತ್ತು ಸಮಾಜದ ಪ್ರಗತಿಗೆ ಅವರು ನೀಡುವ ಕೊಡುಗೆಗಳನ್ನು ಗೌರವಿಸಲು ನಿಗದಿಪಡಿಸಲಾಗಿದೆ

ಪ್ರೋಟಾನ್‌ನಿಂದ ‘ಲುಮೋ’ AI ಚಾಟ್‌ಬಾಟ್ ಬಿಡುಗಡೆ

ಸುರಕ್ಷಿತ ಇಮೇಲ್ ಮತ್ತು ವಿಪಿಎನ್‌ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!

ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.