spot_img

ಕೂಡಲಸಂಗಮ ಪಂಚಮಸಾಲಿ ಮಠಕ್ಕೆ ರಾತ್ರೋರಾತ್ರಿ ಬೀಗ: ಮೀಸಲಾತಿ ಹೋರಾಟದ ನಡುವೆ ಭಕ್ತರಲ್ಲಿ ತೀವ್ರ ಸಂಚಲನ

Date:

ಕೂಡಲಸಂಗಮ : ಮೀಸಲಾತಿ ಹೋರಾಟದಿಂದ ರಾಜ್ಯದ ಗಮನ ಸೆಳೆದಿದ್ದ ಕೂಡಲಸಂಗಮದ ಪಂಚಮಸಾಲಿ ಮಠದ ಆವರಣಕ್ಕೆ ಭಾನುವಾರ ರಾತ್ರೋರಾತ್ರಿ ಬೀಗ ಹಾಕಲಾಗಿದ್ದು, ಭಕ್ತವೃಂದದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಮಠದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದರಿಂದ ರಕ್ಷಣೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರು ಸಮರ್ಥಿಸಿಕೊಂಡಿದ್ದಾರೆ.

ಕೂಡಲಸಂಗಮದಲ್ಲಿರುವ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ಗೆ ಸೇರಿದ, ಬಸವ ಜಯಮೃತ್ಯುಂಜಯ ಸ್ವಾಮೀಜಿ ಇರುವ ಪೀಠದ ಕಟ್ಟಡದ ಗೇಟಿಗೆ ಭಾನುವಾರ ರಾತ್ರಿ ಬೀಗ ಹಾಕಲಾಗಿದ್ದು, ಸುತ್ತಲೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾರು ಬೀಗ ಹಾಕಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲವಾದರೂ, ತಿಂಗಳಿನಿಂದ ವ್ಯವಸ್ಥಾಪಕರಾಗಿದ್ದವರು ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ವಿವಾದಕ್ಕೆ ಕಾರಣವೇನು? ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರಗೊಂಡಿತ್ತು. ವಿಜಯಾನಂದ ಕಾಶಪ್ಪನವರ್, ಹೆಬ್ಬಾಳ್ಕರ್ (ಕಾಂಗ್ರೆಸ್) ಮತ್ತು ಯತ್ನಾಳ್ (ಬಿಜೆಪಿ) ಮುಂತಾದವರು ಈ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆ ಪಕ್ಷದ ನಾಯಕರು ಹೋರಾಟದಿಂದ ಹಿಂದೆ ಸರಿದಿದ್ದರು. ಆದರೆ, ಅಂದಿನ ಬಿಜೆಪಿ ನಾಯಕ ಯತ್ನಾಳ್ ಮತ್ತು ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ನಡುವಿನ ಒಗ್ಗಟ್ಟು, ವಿಜಯಾನಂದ ಕಾಶಪ್ಪನವರ ಮತ್ತು ಶ್ರೀಗಳ ಮಧ್ಯೆ ಬಿರುಕು ಮೂಡಲು ಕಾರಣವಾಗಿತ್ತು. ಕೆಲ ತಿಂಗಳ ಹಿಂದೆ ಸ್ವಾಮೀಜಿ ಅವರನ್ನು ಪೀಠಾಧಿಪತಿ ಸ್ಥಾನದಿಂದ ಕೆಳಗಿಳಿಸುವ ವಿಚಾರವೂ ಚರ್ಚೆಗೆ ಬಂದಿತ್ತು. ಇದೀಗ ಕಾಶಪ್ಪನವರ ಬೆಂಬಲಿಗರು ಮಠಕ್ಕೆ ಬೀಗ ಹಾಕಿರುವುದು ಪಂಚಮಸಾಲಿ ಸಮುದಾಯದಲ್ಲಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಶ್ರೀಗಳು ಮತ್ತು ಶಾಸಕರ ಪ್ರತಿಕ್ರಿಯೆ: ಘಟನೆ ಕುರಿತು ಪ್ರತಿಕ್ರಿಯಿಸಿದ ಜಯಮೃತ್ಯುಂಜಯ ಶ್ರೀಗಳು, “ನಾನು ಸಮಾಜ ಸಂಘಟನೆ ಹಾಗೂ ಮೀಸಲಾತಿ ಹೋರಾಟಕ್ಕೆ ಜನರನ್ನು ಸಿದ್ಧಗೊಳಿಸಲು ಜಿಲ್ಲಾ ಪ್ರವಾಸದಲ್ಲಿದ್ದೇನೆ. ನಾನು ಹೊರಗಿದ್ದಾಗ ಏನು ನಡೆಯಿತು ಎಂದು ಗೊತ್ತಿಲ್ಲ, ಯಾರು ಬೀಗ ಹಾಕಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಪೀಠಕ್ಕೆ ತಲುಪಿದ ಬಳಿಕ ನೈಜ ಸ್ಥಿತಿ ಅರಿಯುತ್ತೇನೆ” ಎಂದರು.

ಟ್ರಸ್ಟ್ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, “ಮಠದಲ್ಲಿ ಅಹಿತಕರ ಚಟುವಟಿಕೆಗಳು ನಡೆಯದಿರಲಿ ಎಂಬ ಉದ್ದೇಶದಿಂದ ಗೇಟ್ ಹಾಕಿ ಬೀಗ ಹಾಕಲಾಗಿದೆ. ಮಠದ ಟ್ರಸ್ಟ್ ಅಧ್ಯಕ್ಷನಾಗಿ ಮಠದ ಸುರಕ್ಷತೆ ನನ್ನ ಜವಾಬ್ದಾರಿ. ಇದು ಸ್ವಾಮೀಜಿಗೆ ಹೇಳಿ ಮಾಡುವಂತದ್ದಲ್ಲ. ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.