spot_img

ಕುದುರೆಮುಖ ಅಕ್ರಮ ಬೇಟೆ: ಇಬ್ಬರು ಬಂಧನ

Date:

ಕಾರ್ಕಳ ತಾಲೂಕಿನ ನೂರಾಲ್‌ಬೆಟ್ಟು ಗ್ರಾಮದ ಮೂಲಿಕಾರಪ್ಪ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ.

ಅಪರಾಧ ಸ್ಥಳದಲ್ಲಿ ನಡೆಸಿದ ತಪಾಸಣೆಯಲ್ಲಿ 1 ಬೇಟೆ ಬಂದೂಕು, 21 ಕಾಡತೂಸು, 1 ಸರ್ಚ್‌ಲೈಟ್, 2 ಮೊಬೈಲ್ ಫೋನ್, ಬೇಟೆಗೆ ಬಳಸಿದ ಕಾರು ಮತ್ತು 1 ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದ ತನಿಖೆಯ ನಂತರ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಕಾರ್ಯಾಚರಣೆಯನ್ನು ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮು ಬಾಬು ಅವರ ನಿರ್ದೇಶನದಂತೆ, ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಶಶಿಧರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಅದರಲ್ಲಿ ಉಪವಲಯ ಅರಣ್ಯಾಧಿಕಾರಿ ರಾಜು ಎಲ್.ಜೆ, ಅರಣ್ಯ ರಕ್ಷಕರು ಅಭಿಲಾಷ್ ಎಸ್.ಬಿ, ಪಕೀರಪ್ಪ, ಮಲ್ಲಯ್ಯ ಹಾಗೂ ಬೇಟೆ ನಿಯಂತ್ರಣ ಕಾವಲುಗಾರರಾದ ಹರೀಶ್ ಎಂ, ನಿತಿನ್, ಅಜಿತ್ ಹಾಗೂ ವಾಹನ ಚಾಲಕರಾದ ದಾಮೋದರ, ನಿತಿನ್ ಜೆ ಹೆಡ್ಡೆ ಅವರು ಪ್ರಮುಖ ಪಾತ್ರವಹಿಸಿದ್ದರು. ಈ ಕಾರ್ಯಾಚರಣೆ ವನ್ಯಜೀವಿ ಸಂರಕ್ಷಣೆಗೆ ಮತ್ತಷ್ಟು ಬಲ ನೀಡಿದ್ದು, ಅಕ್ರಮ ಬೇಟೆಗಾರರಿಗೆ ಎಚ್ಚರಿಕೆಯ ಸಂದೇಶವಾಗಿಯೂ ಪರಿಣಮಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.