ಕುಂದಾಪುರ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ನಮೇಶ್ ಶವವಾಗಿ ಪತ್ತೆ

Date:

spot_img

ಕುಂದಾಪುರ: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನ ಮೃತದೇಹ ಶನಿವಾರ ಬೆಳಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಅವರ ಪುತ್ರ, ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ನಮೇಶ್ (17) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ನಮೇಶ್ ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ವಾಪಸಾಗಿರಲಿಲ್ಲ. ತಂದೆ ಇತ್ತೀಚೆಗೆ ಕೊಡಿಸಿದ್ದ ತನ್ನ ಐಫೋನ್ ಮೊಬೈಲ್ ಅನ್ನು ಮನೆಯಲ್ಲೇ ಬಿಟ್ಟು, ಬೈಕ್‌ನಲ್ಲಿ ತೆರಳಿದ್ದನು. ಹೆಮ್ಮಾಡಿ ಸಮೀಪದ ಕನ್ನಡಕುದ್ರು ನದಿ ತೀರದಲ್ಲಿ ಆತನ ಬೈಕ್ ಮತ್ತು ಕಾಲೇಜು ಬ್ಯಾಗ್ ಪತ್ತೆಯಾಗಿತ್ತು.

ರಾತ್ರಿಯಾದರೂ ಮಗ ಮನೆಗೆ ಬಾರದಿದ್ದಾಗ ಕುಟುಂಬದವರು ಕುಂದಾಪುರ‌ ನಗರ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟ ಆರಂಭಿಸಿದ್ದರು. ಗುರುವಾರ ಸಂಜೆ ಮತ್ತು ಶುಕ್ರವಾರ ಅಗ್ನಿಶಾಮಕ‌ದಳ, ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಮತ್ತು ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದ್ದರೂ, ನಮೇಶ್ ಪತ್ತೆಯಾಗಿರಲಿಲ್ಲ.

ಶನಿವಾರ ಬೆಳಿಗ್ಗೆ ಗಂಗೊಳ್ಳಿ ದಾಕುಹಿತ್ಲು ನದಿತೀರದಲ್ಲಿ ನಮೇಶ್ ಮೃತದೇಹ ಪತ್ತೆಯಾಗಿದೆ. ಆತನ ಸಾವಿಗೆ ನಿಖರ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.