ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಮಹಾತ್ಮ ಗಾಂಧಿ ಹೆಸರು ದುರ್ಬಳಕೆ : ಕುತ್ಯಾರು ನವೀನ್ ಶೆಟ್ಟಿ

Date:

spot_img
Naveen

ದೇಶದ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮ ಗಾಂಧಿ ಅವರ ಮಾತನ್ನೇ ಪಾಲಿಸದ ಕಾಂಗ್ರೆಸಿಗರು ಸ್ವಾತಂತ್ರ್ಯ ದೊರೆತ 79 ವರ್ಷಗಳ ಬಳಿಕವೂ ಕೇವಲ ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಮಾತ್ರ ಮಹಾತ್ಮ ಗಾಂಧಿ ಅವರ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ವಿಷಾದನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಪರಿಕಲ್ಪನೆಯೊಂದಿಗೆ ಬಡತನ ಮುಕ್ತ ಸ್ವಾವಲಂಬಿ ಗ್ರಾಮ ನಿರ್ಮಾಣದ ಚಿಂತನೆಯೊಂದಿಗೆ ಬಡವರ, ರೈತರ ಮತ್ತು ಮಹಿಳಾ ಸಬಲೀಕರಣದ ಸಹಿತ ದುಡಿಯುವ ಕೈಗಳಿಗೆ ಉದ್ಯೋಗ ಮತ್ತು ಸುಧಾರಿತ ಆದಾಯ ನೀಡುವ ಜೊತೆಗೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ‘ವಿಬಿ-ಜಿ ರಾಮ್ ಜಿ’ ಯೋಜನೆಯಲ್ಲಿರುವ ಮಹಾತ್ಮ ಗಾಂಧಿ ಅವರಿಗೆ ಪ್ರಿಯವಾದ ‘ರಾಮ್’ ಹೆಸರನ್ನು ಕಾಂಗ್ರೆಸಿಗರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿಯೇ ಇಂತಹ ಉದಾತ್ತ ಯೋಜನೆಯನ್ನು ಯಾವುದೇ ಮೌಲ್ಯಯುತ ಕಾರಣವಿಲ್ಲದೆ ಕಾಂಗ್ರೆಸ್ ವಿರೋಧಿಸುತ್ತಿದೆ.

ಹಳ್ಳಿಗಳ ಅಭಿವೃದ್ಧಿಗೆ ಯಾವುದೇ ಪರಿಣಾಮಕಾರಿ ಯೋಜನೆಗಳನ್ನು ರೂಪಿಸಲು ವಿಫಲವಾಗಿರುವ ಕಾಂಗ್ರೆಸ್ ಈ ಹಿಂದೆ ‘ರೋಜ್‌ಗಾರ್‌’ ಯೋಜನೆಯನ್ನು ‘ನರೇಗಾ’ ಎಂದು ಪುನರ್ ನಾಮಕರಣ ಮಾಡಿದೆ. ಬಳಿಕ ಅದನ್ನು ‘ಮನ್ರೇಗಾ’ ಎಂದು ಬದಲಾವಣೆ ಮಾಡಿದೆ. ಕಾಂಗ್ರೆಸ್ ಅದೆಷ್ಟು ಯೋಜನೆಗಳಿಗೆ ನೆಹರೂ ಕುಟುಂಬದ ಹೆಸರನ್ನೇ ಇರಿಸಿದೆ ಎಂಬುದು ಜಗಜ್ಜಾಹೀರಾಗಿದೆ.

ಗ್ರಾಮಾಭಿವೃದ್ಧಿಯ ದೂರದರ್ಶಿತ್ವದ ಚಿಂತನೆಯನ್ನು ಹೊಂದಿರುವ ‘ವಿಬಿ-ಜಿ ರಾಮ್‌ ಜಿ’ ಯೋಜನೆಯಡಿ ಗ್ರಾಮ ಪಂಚಾಯತ್‌ಗಳೇ ಅಭಿವೃದ್ಧಿ ಯೋಜನೆಯನ್ನು ರೂಪಿಸುತ್ತವೆ. ತಂತ್ರಜ್ಞಾನವನ್ನು ಬಳಸಿ ಭ್ರಷ್ಟಾಚಾರಕ್ಕೆ ತಡೆ ಹಾಕಲಾಗುತ್ತದೆ. ಈ ಹಿಂದೆ ಇದ್ದ ವಾರ್ಷಿಕ 100 ದಿನಗಳ ಕೆಲಸವನ್ನು ಇದೀಗ 125 ದಿನಗಳಿಗೆ ವಿಸ್ತರಿಸಲಾಗಿದೆ. ದಿನದ ಕೂಲಿಯನ್ನು (ಸಂಬಳ) ರೂ.174 ರಿಂದ ರೂ.370ಕ್ಕೆ ಏರಿಸಲಾಗಿದೆ. ಪ್ರತಿ ವ್ಯಕ್ತಿಗೆ ಈ ಹಿಂದೆ ಇದ್ದ ವಾರ್ಷಿಕ ಗರಿಷ್ಠ ಮಿತಿಯನ್ನು ರೂ.17,400 ರಿoದ ರೂ.46,250ಕ್ಕೆ ಏರಿಸಲಾಗಿದೆ.

ಇಂತಹ ಉದಾತ್ತ ಯೋಜನೆ ಜಾರಿಯಾದರೆ ಬಿಜೆಪಿ ಜನಪ್ರಿಯತೆ ಇನ್ನಷ್ಟು ಹೆಚ್ಚುತ್ತದೆ ಹಾಗೂ ತ್ರಿಸ್ತರ ಸರಕಾರಗಳಲ್ಲಿ ಒಂದಾಗಿರುವ ಗ್ರಾಮ ಪಂಚಾಯತ್ ಮಟ್ಟದಲ್ಲಿ ‘ವಿಬಿ-ಜಿ ರಾಮ್‌ ಜಿ’ ಯೋಜನೆಯಿಂದ ಅಭಿವೃದ್ಧಿಯ ಹೊಸ ಶಖೆ ಪ್ರಾರಂಭವಾಗಲಿದೆ ಎಂಬುದನ್ನು ಮನಗಂಡಿರುವ ಕಾಂಗ್ರೆಸ್ ನಿರಂತರ ಅಪಪ್ರಚಾರದ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿರುವುದು ಖಂಡನೀಯ. ಜನ ವಿರೋಧಿ, ಅಭಿವೃದ್ಧಿ ವಿರೋಧಿ ನೀತಿಗಳಿಂದ ದೇಶದೆಲ್ಲೆಡೆ ತಿರಸ್ಕೃತಗೊಂಡಿರುವ ಕಾಂಗ್ರೆಸ್ ಗೆ ಜನತೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.