spot_img

ಕುಮಟಾ ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ – ಶಿರಸಿ-ಕುಮಟಾ ರಸ್ತೆಯಲ್ಲಿ ರಾತ್ರಿ ಸಂಚಾರ ಸಂಪೂರ್ಣ ನಿಷೇಧ

Date:

spot_img

ಶಿರಸಿ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಶಿರಸಿ-ಕುಮಟಾ ರಸ್ತೆ ಮಾರ್ಗದಲ್ಲಿ ರಾತ್ರಿ ಸಮಯದಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ರಸ್ತೆಯಲ್ಲಿ ಜಾರುವ ಮಣ್ಣು, ಬಂಡೆಗಳ ಕುಸಿತದ ಭೀತಿ ಇರುವ ಕಾರಣದಿಂದಾಗಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿರಸಿ ಹಾಗೂ ಕುಮಟಾ ಎರಡು ಕಡೆಯಿಂದಲೂ ರಾತ್ರಿ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ವಾಹನ ಸಂಚಾರಕ್ಕೆ ಅವಕಾಶವಿಲ್ಲ.

ಸಂಚಾರ ನಿಯಂತ್ರಣದ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡಲು ದಾರಿಯ ಎರಡೂ ತುದಿಗಳಲ್ಲಿಯೂ ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ಅಪಾಯದಿಂದ ಜನರನ್ನು ಎಚ್ಚರಿಸಲು ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ. ನಿರಂತರ ಮಳೆಯಿಂದಾಗಿ ಪರಿಸ್ಥಿತಿ ಮತ್ತೆ ಹದಗೆಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಂದ ಸಹಕಾರವನ್ನು ಕೋರಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಉಡುಪಿ ತಾಲೂಕು : 79ನೇ ಸ್ವಾತಂತ್ರ್ಯ ದಿನಾಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಇದರ ವತಿಯಿಂದ ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಪಣಂಬೂರಿನ ವೀಳ್ಯದೆಲೆ: ಆರೋಗ್ಯ ಭಾಗ್ಯದ ಕಣಜ

ವೀಳ್ಯದೆಲೆ ಎಂದರೆ ಕೇವಲ ತಾಂಬೂಲವಲ್ಲ, ಇದು ಔಷಧೀಯ ಗುಣಗಳ ಕಣಜ

ಗೂಗಲ್‌ನಿಂದ ಕೃತಕ ಬುದ್ಧಿಮತ್ತೆ ಆಧಾರಿತ ‘ಜೀನಿ 3’ ಬಿಡುಗಡೆ

ಗೂಗಲ್ ಡೀಪ್‌ಮೈಂಡ್ ಸಂಸ್ಥೆಯು ತನ್ನ ಇತ್ತೀಚಿನ ಸಂವಾದಾತ್ಮಕ 3D AI ಮಾದರಿ ಜೀನಿ 3 ಅನ್ನು ಅನಾವರಣಗೊಳಿಸಿದೆ.

ಧರ್ಮಸ್ಥಳ ಪ್ರಕರಣ: ಸುಳ್ಳು ದೂರು ನೀಡಿದರೆ ಕಠಿಣ ಕ್ರಮ – ಗೃಹ ಸಚಿವ ಜಿ. ಪರಮೇಶ್ವರ

ಸಾಮೂಹಿಕ ಸಮಾಧಿ ಆರೋಪ ಸುಳ್ಳಾದರೆ ದೂರುದಾರರಿಗೆ ಕಠಿಣ ಶಿಕ್ಷೆ: ಪರಮೇಶ್ವರ