spot_img

ಅಂಡರ್‌ವರ್ಲ್ಡ್‌ನಿಂದ ಜೀವ ಬೆದರಿಕೆ ಕರೆಗಳು ಬಂದಿವೆ: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟನೆ

Date:

spot_img

ಬೀದರ್: “ನನಗೂ ಅಂಡರ್‌ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬಂದಿವೆ,” ಎಂದು ಕರ್ನಾಟಕ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಗುರುವಾರ ಬಹಿರಂಗವಾಗಿ ತಿಳಿಸಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೀದರ್ ನಗರಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದರು. “ಹೌದು, ನನಗೂ ಕೆಲವು ಕರೆಗಳು ಬಂದಿವೆ. ಆದರೆ, ನಾನು ಈ ಎಲ್ಲಕ್ಕೆ ಹೆದರುವ ವ್ಯಕ್ತಿ ಅಲ್ಲ. ದೇವರು ನನ್ನ ಜೀವನ ಹೇಗಿರಬೇಕು ಎಂಬುದನ್ನು ಬರೆದುಕೊಂಡಿದ್ದಾರೆ. ನಾನು ನೆಮ್ಮದಿಯಿಂದ ಬದುಕಿ, ನೆಮ್ಮದಿಯಿಂದ ಸಾಯಲು ಪ್ರಾರ್ಥನೆ ಮಾಡುತ್ತೇನೆ,” ಎಂದು ಖಾದರ್ ಹೇಳಿದರು.

ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಅವರು ಪಿಎಫ್‌ಐ ಸಂಘಟನೆಯಿಂದ ಯು.ಟಿ. ಖಾದರ್ ರವರಿಗೆ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ನನಗಾಗಿ ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸುವ ಅಗತ್ಯವಿಲ್ಲ. ಜಿಲ್ಲೆಯ ಜನರ ಸುರಕ್ಷತೆಗೆ ಅಗತ್ಯವಿದ್ದರೆ ಸ್ಥಾಪಿಸಬಹುದು. ಆದರೆ ನನ್ನ ವಿಷಯದಲ್ಲಿ ಅಷ್ಟು ಅಗತ್ಯವಿಲ್ಲ. ಎಲ್ಲವನ್ನೂ ದೇವರು ನಿರ್ಧಾರ ಮಾಡುತ್ತಾರೆ. ನಮ್ಮ ಕೈಯಲ್ಲಿ ಏನೂ ಇಲ್ಲ,” ಎಂದರು.

ಈ ಹೇಳಿಕೆಯಿಂದ ರಾಜ್ಯ ರಾಜಕೀಯ ವಲಯದಲ್ಲಿ ಆತಂಕ ಮೂಡಿದ್ದು, ಈ ಬೆದರಿಕೆ ಕರೆಗಳ ಬಗ್ಗೆ ಹೆಚ್ಚಿನ ತನಿಖೆಗೆ ಆಗ್ರಹ ವ್ಯಕ್ತವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸ್ನೇಹಿತರ ದಿನಾಚರಣೆ

ಈ ವಿಶೇಷ ದಿನವನ್ನು ಆಗಸ್ಟ್ 3ರಂದು (3/8) ಆಚರಿಸುವುದು ಸ್ನೇಹದ ಮಹತ್ವವನ್ನು ಗುರುತಿಸುವುದಕ್ಕಾಗಿ. ಇದು ನಮ್ಮ ಜೀವನದಲ್ಲಿ ಮಿತ್ರರೊಂದಿಗೆ ಹಂಚಿಕೊಳ್ಳುವ ಪ್ರೀತಿ, ನಂಬಿಕೆ ಮತ್ತು ಸಹಾನುಭೂತಿಯನ್ನು ಸ್ಮರಿಸುತ್ತದೆ.

ಕೊಲಂಬಿಯಾ ವಿಶ್ವವಿದ್ಯಾಲಯದ ಕೃತಕ ಮರಗಳ ತಂತ್ರಜ್ಞಾನ: ಹವಾಮಾನ ಬದಲಾವಣೆ ವಿರುದ್ಧದ ಹೊಸ ಅಸ್ತ್ರ?

ಜಾಗತಿಕ ತಾಪಮಾನ ಏರಿಕೆ ವಿರುದ್ಧ ಹೋರಾಡಲು, ಕೊಲಂಬಿಯಾ ವಿಶ್ವವಿದ್ಯಾಲಯದ ವಿಜ್ಞಾನಿ ಕ್ಲಾಸ್ ಲ್ಯಾಕ್ನರ್ ಅವರು "ಕೃತಕ ಮರ" ಎಂಬ ಕಲ್ಪನೆಯನ್ನು ರೂಪಿಸಿದರು.

ಕೂದಲಿನ ಆರೋಗ್ಯಕ್ಕೆ ಕರಿಬೇವು ಮತ್ತು ಕೊಬ್ಬರಿ ಎಣ್ಣೆಯ ಮ್ಯಾಜಿಕ್: ಪರಿಣಾಮಕಾರಿ ಮನೆಮದ್ದು ಇಲ್ಲಿದೆ

ಕೊಬ್ಬರಿ ಎಣ್ಣೆಗೆ ಕರಿಬೇವನ್ನು ಬೆರೆಸಿ ಬಳಸುವುದರಿಂದ ಕೂದಲು ಉದುರುವಿಕೆ ನಿಲ್ಲುತ್ತದೆ ಮತ್ತು ಕೂದಲು ದಟ್ಟವಾಗಿ, ಕಪ್ಪಾಗಿ, ವೇಗವಾಗಿ ಬೆಳೆಯುತ್ತದೆ.

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಮೂವರು ಆರೋಪಿಗಳ ಬಂಧನ

ಸ್ಯಾಂಡಲ್‌ವುಡ್ ನಟಿ ರಮ್ಯಾ (ದಿವ್ಯ ಸ್ಪಂದನಾ) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.