
ಬೈಲೂರು: ಲಯನ್ಸ್ ಕ್ಲಬ್ ನೀರೆ ಬೈಲೂರು ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ‘ಲಯನ್ಸ್ ಗುರು ನಮನ’ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಶಿಕ್ಷಕರು ಕರ್ನಾಟಕ ರಾಜ್ಯ ಸರ್ಕಾರದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ 2025ರ ಕಡ್ಡಾಯ ತರಬೇತಿಯಲ್ಲಿ ನಿಯೋಜನೆಗೊಂಡಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ತಿಳಿಸಿದೆ.
ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಕಾರ್ಯಕ್ರಮವನ್ನು ಮುಂದೂಡಿದ್ದು, ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಮತ್ತು ಸಾರ್ವಜನಿಕರು ಸಹಕರಿಸುವಂತೆ ಲಯನ್ಸ್ ಕ್ಲಬ್ ನೀರೆ ಬೈಲೂರಿನ ಅಧ್ಯಕ್ಷರಾದ ಲಯನ್ ಪ್ರಶಾಂತ್ ಕುಮಾರ್ ಶೆಟ್ಟಿ ಮತ್ತು ಸಂಘದ ಸರ್ವ ಸದಸ್ಯರು ವಿನಂತಿಸಿದ್ದಾರೆ.



































