ಮಧ್ಯಪ್ರದೇಶದಲ್ಲಿ ಮರಣೋತ್ತರ ಪರೀಕ್ಷೆ ವೇಳೆ ಎದ್ದು ಕುಳಿತ ಯುವಕನ ಶವ !

Date:

spot_img

ಮಧ್ಯಪ್ರದೇಶ: ವೈದ್ಯಕೀಯ ಲೋಕವೇ ಬೆಚ್ಚಿಬೀಳುವಂತಹ ಘಟನೆಯೊಂದು ಮಧ್ಯಪ್ರದೇಶದ ಗುನಾ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದ್ದು, ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದ ಯುವಕನೊಬ್ಬ ಮರಣೋತ್ತರ ಪರೀಕ್ಷೆಯ ಮೇಜಿನ ಮೇಲೆಯೇ ಎದ್ದು ಕುಳಿತ ಆಘಾತಕಾರಿ ಪ್ರಸಂಗ ಬೆಳಕಿಗೆ ಬಂದಿದೆ. ವೈದ್ಯರ ಅಚಾತುರ್ಯದಿಂದಾಗಿ ಬದುಕಿದ್ದ ಯುವಕನೇ ಶವಾಗಾರ ಸೇರಿದ್ದ ಈ ಘಟನೆ ಇಡೀ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಹುಜ್ಮಿಲ್ ಪ್ರದೇಶದ ನಿವಾಸಿ 20 ವರ್ಷದ ಜಾನ್ ಪಾರ್ಟಿ ಎಂಬ ಯುವಕ ಮಾರ್ಚ್ 11 ರಂದು ಮಾನಸಿಕ ಒತ್ತಡದಿಂದ ವಿಷ ಸೇವಿಸಿದ್ದರು. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿನ ವೈದ್ಯರು ಯುವಕನನ್ನು ಪರೀಕ್ಷಿಸುವಲ್ಲಿ ತೋರಿದ ಆತುರ ಅನಾಹುತಕ್ಕೆ ದಾರಿ ಮಾಡಿಕೊಟ್ಟಿತ್ತು. ಯುವಕ ಮೃತಪಟ್ಟಿದ್ದಾನೆ ಎಂದು ದೃಢೀಕರಿಸಿದ ವೈದ್ಯರು, ಯಾವುದೇ ವಿಸ್ತೃತ ತಪಾಸಣೆ ನಡೆಸದೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಆದರೆ ಶವಾಗಾರದಲ್ಲಿ ವೈದ್ಯರು ದೇಹವನ್ನು ಸೀಳಲು ಸಿದ್ಧತೆ ನಡೆಸುತ್ತಿದ್ದಾಗಲೇ ಯುವಕನ ದೇಹದಲ್ಲಿ ಚಲನೆ ಕಂಡುಬಂದಿದೆ. ಕ್ಷಣಾರ್ಧದಲ್ಲಿ ಪ್ರಜ್ಞೆ ಬಂದ ಯುವಕ ತನ್ನ ಸುತ್ತಲಿನ ಸ್ಥಿತಿಯನ್ನು ಕಂಡು ಭಯಭೀತನಾಗಿ ಬೆತ್ತಲೆಯಾಗಿಯೇ ಶವಾಗಾರದಿಂದ ಹೊರಕ್ಕೆ ಓಡಿ ಬಂದಿದ್ದಾನೆ. “ಒಂದು ವೇಳೆ ಪ್ರಜ್ಞೆ ಮರಳದಿದ್ದರೆ ವೈದ್ಯರು ನನ್ನನ್ನು ಜೀವಂತವಾಗಿಯೇ ಸೀಳುತ್ತಿದ್ದರು” ಎಂದು ಯುವಕ ಹೇಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ