spot_img

ಮಹಾಕುಂಭ ಮೇಳಕ್ಕೆ 7,500 ಕೋಟಿ ರೂ. ಖರ್ಚು– 3 ಲಕ್ಷ ಕೋಟಿ ರೂ. ಆದಾಯದ ನಿರೀಕ್ಷೆ!

Date:

ಪ್ರಯಾಗ್‌ರಾಜ್: ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳ ಜನವರಿ 13ರಿಂದ ಪ್ರಾರಂಭವಾಗಿ ಫೆಬ್ರವರಿ 26ರಂದು ಅಂತ್ಯವಾಗಲಿದೆ. ಈ ಬಾರಿ 144 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಕ್ಕೆ ಆಲೋಚನೆಗೂ ಮೀರಿದ ಭಕ್ತಸಂದಣಿಗೆ ಸಾಕ್ಷಿಯಾಗಿದೆ. ಇಲ್ಲಿವರೆಗೆ 53 ಕೋಟಿ ಯಾತ್ರಾರ್ಥಿಗಳು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದು, ಮೇಳದ ಆರಂಭದಿಂದಲೇ ಸರಾಸರಿ 60 ಕೋಟಿ ಭಕ್ತರು ಈ ಪವಿತ್ರ ಕ್ಷಣದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

7,500 ಕೋಟಿ ರೂ. ವೆಚ್ಚ – ಏನು ನಿರ್ಮಾಣಗೊಂಡಿದೆ?
ಉತ್ತರ ಪ್ರದೇಶ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಂಟಿಯಾಗಿ 7,500 ಕೋಟಿ ರೂ. ವೆಚ್ಚ ಮಾಡಿದ್ದು, ಅದರಲ್ಲಿ
✅ 14 ಹೊಸ ಫ್ಲೈಓವರ್‌ಗಳು
✅ 6 ಅಂಡರ್‌ಪಾಸ್‌ಗಳು
✅ 200ಕ್ಕೂ ಹೆಚ್ಚು ಅಗಲವಾದ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ.
✅ ಹೊಸ ಕಾರಿಡಾರ್‌ಗಳು, ರೈಲ್ವೆ ನಿಲ್ದಾಣ ವಿಸ್ತರಣೆ ಹಾಗೂ ಆಧುನಿಕ ವಿಮಾನ ನಿಲ್ದಾಣ ಟರ್ಮಿನಲ್ ಕೂಡ ಸೇರ್ಪಡೆಯಾಗಿದೆ.ಇದಲ್ಲದೆ , ಕುಂಭಮೇಳದ ವ್ಯವಸ್ಥೆಗಳನ್ನು ಇನ್ನಷ್ಟು ಉತ್ತಮಗೊಳಿಸಲು ಹೆಚ್ಚುವರಿಯಾಗಿ 1,500 ಕೋಟಿ ರೂ. ಮೀಸಲಿಡಲಾಗಿದೆ.

ಮಹಾಕುಂಭದಿಂದ ಬೃಹತ್ ಆದಾಯ!

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಕಾರ, ಈ ಮೇಳದಿಂದ ರಾಜ್ಯಕ್ಕೆ ಮೂರು ಲಕ್ಷ ಕೋಟಿ ರೂ. ಆದಾಯ ಬರುವ ಸಾಧ್ಯತೆ ಇದೆ. ರಾಜ್ಯದ ಜಿಡಿಪಿ 3.25ರಿಂದ 3.5 ಲಕ್ಷ ಕೋಟಿ ರೂ.ಗೆ ಏರಿಕೆ ಆಗಬಹುದು ಎಂಬ ನಿರೀಕ್ಷೆಯೂ ಇದೆ.

ಕುಂಭಮೇಳದ ಸಂದರ್ಭದಲ್ಲಿ ಅಯೋಧ್ಯೆ, ಕಾಶಿ, ಚಿತ್ರಕೂಟ, ಗೋರಖ್‌ಪುರ, ನೈಮಿಶಾರಣ್ಯಂ ಸೇರಿದಂತೆ ಪವಿತ್ರ ಕ್ಷೇತ್ರಗಳಿಗೆ ಹೋದ ಭಕ್ತಾಧಿಗಳಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಮಾತ್ರವಲ್ಲದೆ, ಈ ಒಂದೇ ವರ್ಷದಲ್ಲಿ ಅಯೋಧ್ಯೆಗೆ ಭಕ್ತರು 700 ಕೋಟಿ ರೂ. ದೇಣಿಗೆಗಳ ರೂಪದಲ್ಲಿ ನೀಡಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ಇಂಥಾ ಬೃಹತ್ ಧಾರ್ಮಿಕ ಉತ್ಸವ ಆರ್ಥಿಕ ಬೆಳವಣಿಗೆಗೂ ದೊಡ್ಡ ಉತ್ತೇಜನ ನೀಡುವಂತಾಗಿದೆ!

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ತಡೆ: ಕಮಲ್ ಹಾಸನ್‌ಗೆ ಹೈಕೋರ್ಟ್ ಆದೇಶ

ನಟ ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ವಿವಾದ ಇತ್ಯರ್ಥವಾಗುವವರೆಗೆ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ.

ಅತ್ರಾಡಿ ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಅತ್ರಾಡಿ ಶೇಡಿಗುಡ್ಡೆ ಬಳಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕೊರೊನಾ ಸೋಂಕಿನಿಂದ ಪೀಟರ್ ಮಥಾಯಸ್ ನಿಧನ: ತಹಶೀಲ್ದಾರ್ ಭೇಟಿನೀಡಿ ಸಾಂತ್ವನ

ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಮಥಾಯಸ್ (65) ಅವರು ಕೋವಿಡ್-19 ಪಾಸಿಟಿವ್ ದೃಢಪಟ್ಟ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೂನ್ 2 ರಂದು ನಿಧನರಾದರು.

ಯೂರಿಕ್ ಆಸಿಡ್ ನಿಯಂತ್ರಣಕ್ಕೆ ಹಸಿ ಪಪ್ಪಾಯಿ – ನೈಸರ್ಗಿಕ ಮನೆಮದ್ದು!

ಅಧಿಕ ಯೂರಿಕ್ ಆಮ್ಲ ಸಮಸ್ಯೆ ಇತ್ತೀಚೆಗೆ ಸಾಮಾನ್ಯವಾಗಿದ್ದು, ಇದು ತಡವಾಗಿ ಗೋಚರಿಸುವ ಸಮಸ್ಯೆಯಾಗಿರುವುದರಿಂದ ಹೆಚ್ಚು ಮಂದಿಗೆ ಆರೋಗ್ಯದಲ್ಲಿ ಕಿರಿಕಿರಿ ಉಂಟುಮಾಡುತ್ತಿದೆ. ಈಗ, ಈ ಸಮಸ್ಯೆಗೆ ಹಸಿ ಪಪ್ಪಾಯಿ ಉತ್ತಮ ಮನೆಮದ್ದಾಗಿದೆ.