spot_img

ಉಡುಪಿ ನಗರಸಭೆಗೆ ಹೊಸ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ ಅಧಿಕಾರ ಸ್ವೀಕಾರ

Date:

spot_img

ಉಡುಪಿ : ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಕೆ.ಎ.ಎಸ್ ಅಧಿಕಾರಿ ಮಹಾಂತೇಶ ಹಂಗರಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಜೂನ್ 23ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಮಹಾಂತೇಶ ಹಂಗರಗಿ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಿಂದ ಬಂದವರು. ಕೃಷಿ ವಿಭಾಗದಲ್ಲಿ ಬಿಎಸ್ಸಿ ಪದವೀಧರರಾಗಿರುವ ಅವರು 2017ನೇ ಸಾಲಿನ ಕೆ.ಎ.ಎಸ್ ಬ್ಯಾಚ್ ಅಧಿಕಾರಿಯಾಗಿದ್ದಾರೆ.

ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಮತ್ತು ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಮಹಾಂತೇಶ ಈಗ ಉಡುಪಿ ನಗರಸಭೆಯ ಆಡಳಿತ ಭಾರ ವಹಿಸಿಕೊಂಡಿದ್ದಾರೆ.ನಗರದ ಅಭಿವೃದ್ಧಿ, ಶಿಸ್ತು ಹಾಗೂ ಮೂಲಸೌಕರ್ಯಗಳ ಸುಧಾರಣೆಯ ಕಡೆಗೆ ಅವರು ಪ್ರಾಮಾಣಿಕ ಸೇವೆ ಸಲ್ಲಿಸಲಿದ್ದಾರೆ ಎಂಬ ನಿರೀಕ್ಷೆ ಉಡುಪಿ ನಗರದಲ್ಲಿ ಮೂಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮುದ್ರಾಡಿ ಪ್ರೌಢಶಾಲೆಗೆ ಕ್ರೀಡಾ ಪರಿಕರಗಳ ಹಸ್ತಾಂತರ

ಸಂತೋಷ ಪೂಜಾರಿ ನೆಕ್ಕಾರ್ ಬೆಟ್ಟುರವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಗೆ 1995-96 ನೆ ಸಾಲಿನ ವಿದ್ಯಾರ್ಥಿಗಳು ಕ್ರೀಡಾ ಪರಿಕರಗಳು ಸೇರಿ ಮೂಲಭೂತ ಸೌಲಭ್ಯಗಳಿಗೆ ಕೊಡಮಾಡಿದ 50,000 ರೂಗಳ ಚೆಕ್ ಮತ್ತು ಕ್ರೀಡಾ ಪರಿಕರಗಳ ಹಸ್ತಾಂತರ ಮಾಡಿದರು.

ಪುರಸಭಾ ವ್ಯಾಪ್ತಿಯ ರಸ್ತೆ ಹೊಂಡಗಳನ್ನು ತಕ್ಷಣ ಮುಚ್ಚಿ ಇಲ್ಲವಾದರೆ ಪ್ರತಿಭಟನೆ ಎದುರಿಸಿ : ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ

ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡಗಳೇ ತುಂಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ ಪುರಸಭಾ ಆಡಳಿತ ತಕ್ಷಣ ಎಲ್ಲಾ ಹೊಂಡಗಳನ್ನು ಮುಚ್ಚಬೇಕು ಇಲ್ಲವಾದರೆ ಸಾರ್ವಜನಿಕರ ಜೊತೆಗೂಡಿ ಮಾಡುವ ಪ್ರತಿಭಟನೆಯನ್ನು ಎದುರಿಸಬೇಕಾದಿತು ಎಂದು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗ ಪುರಸಭೆಯನ್ನು ಎಚ್ಚರಿಸಿದ್ದಾರೆ.

ಡಾ. ಟಿ.ಎಂ.ಎ. ಪೈ ಸ್ಮರಣೆ: ಶಿಕ್ಷಣ, ಸಮಾಜಮುಖಿ ಕಾರ್ಯಗಳಿಂದ ಆದರ್ಶ ವ್ಯಕ್ತಿತ್ವ – ಲಕ್ಷ್ಮೀ ನಾರಾಯಣ ಕಾರಂತ

ಮುಕುಂದಕ್ರಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಶಾಲಾ ಸಂಸ್ಥಾಪಕರ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ!

ಅಮೆರಿಕಾದ ಬೋಸ್ಟನ್‌ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.