
ಬೆಳ್ತಂಗಡಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಪುತ್ತೂರಿನ ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣಗಳ ಕುರಿತು ವರದಿ ಸಲ್ಲಿಸಿದ್ದರು. ಈ ವರದಿಯನ್ನು ಪರಿಶೀಲಿಸಿದ ಬಳಿಕ, ಸೆಪ್ಟೆಂಬರ್ 18ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಆದೇಶ ನೀಡಲಾಗಿದೆ.
ಗಡಿಪಾರು ಆದೇಶದ ಪ್ರತಿಯು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಕಚೇರಿಗೆ ತಲುಪಿದ ಬಳಿಕ, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.



































