spot_img

ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

Date:

spot_img

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕಳೆದ ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿ ಅವರನ್ನು ಉಜಿರೆಯಲ್ಲಿ ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರು ಹಿರಿಯಡ್ಕ ಜೈಲಿನಲ್ಲಿದ್ದರು.

ಶನಿವಾರ ಬೆಳಗ್ಗೆ 11 ಗಂಟೆಗೆ ಜಾಮೀನು ಅರ್ಜಿಯ ವಿಚಾರಣೆ ಆರಂಭವಾಗಿತ್ತು. ಈ ವೇಳೆ ಸಹಾಯಕ ಸರ್ಕಾರಿ ಅಭಿಯೋಜಕರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ಪೊಲೀಸರು ಆರೋಪಿಯನ್ನು ನಿಗದಿತ ಸಮಯಕ್ಕೆ ಹಾಜರುಪಡಿಸದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ತೀವ್ರ ತರಾಟೆಗೆ ತೆಗೆದುಕೊಂಡರು. ನಿಮ್ಮಲ್ಲಿಯೇ ವೈಫಲ್ಯ ಇರುವಾಗ ಕಸ್ಟಡಿ ಏಕೆ ಎಂದು ಪ್ರಶ್ನಿಸಿ ಮಧ್ಯಾಹ್ನ 3:30ಕ್ಕೆ ಹಾಜರುಪಡಿಸುವಂತೆ ಸೂಚಿಸಿದರು.

ಸಂಜೆ ವಿಚಾರಣೆ ಮುಂದುವರಿಸಿದ ನ್ಯಾಯಾಲಯವು, ಮಹೇಶ್ ಶೆಟ್ಟಿ ತಿಮರೋಡಿ ಅವರ ಆರೋಗ್ಯದ ದೃಷ್ಟಿಯಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಎಲ್ಲ ಆರೋಪಗಳಿಂದ ತೊಳೆದಂತಾಗಿದೆʼ: ಮಾಸ್ಕ್​ಮ್ಯಾನ್​ ಬಂಧನಕ್ಕೆ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಸುಳ್ಳು ಹೇಳಿಕೆ ನೀಡಿದ್ದ ಚಿನ್ನಯ್ಯ ಅಲಿಯಾಸ್ ಮಾಸ್ಕ್​ಮ್ಯಾನ್​ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ.

ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ “ಅಷ್ಟಮಿದ ಕೆಸರ್ದ ಓಕುಳಿ ” ಕಾರ್ಯಕ್ರಮ

' ಕಾರ್ಕಳ ಟೈಗರ್ಸ್ ' ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಎಸ್ ಆರ್ ಎಜುಕಷನ್ ಟ್ರಸ್ಟ್ (ರಿ ) ಹೆಬ್ರಿ ಮತ್ತು ಜಿ. ಎಸ್. ಬಿ ಯುವಜನ ಸಭಾ ಹೆಬ್ರಿ ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಅಷ್ಟಮಿದ ಕೆಸರ್ದ ಓಕುಳಿ " ಎಂಬ ವಿಭಿನ್ನ ಕಾರ್ಯಕ್ರಮವನ್ನು ಆಗಸ್ಟ್ 24 ರಂದು ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ .

ಧರ್ಮಸ್ಥಳ ವಿವಾದ: ಎರಡು ಹಿಂದುತ್ವ ಶಕ್ತಿಗಳ ನಡುವಿನ ಹೋರಾಟ ಎಂದು ಬಿ.ಕೆ. ಹರಿಪ್ರಸಾದ್ ಬಣ್ಣನೆ

ಧರ್ಮಸ್ಥಳ ಪ್ರಕರಣದ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಹತ್ವದ ಹೇಳಿಕೆ

ವೈದ್ಯರು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಚಿಕಿತ್ಸೆ ವಿಳಂಬ: ಅಮಾಯಕ ನವಜಾತ ಶಿಶುವಿನ ಸಾವು

ಹೆರಿಗೆ ಸಮಯದಲ್ಲಿ ವೈದ್ಯರು ಹಣಕ್ಕೆ ಬೇಡಿಕೆಯಿಟ್ಟು ಚಿಕಿತ್ಸೆಯಲ್ಲಿ ವಿಳಂಬ ಮಾಡಿದ್ದರಿಂದ, ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ, ತಂದೆಯೊಬ್ಬರು ಮಗುವಿನ ಮೃತದೇಹವನ್ನು ಚೀಲದಲ್ಲಿ ಇರಿಸಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ