spot_img

ರಾಷ್ಟ್ರೀಯ ಹೆದ್ದಾರಿ 169A: ಇಂದ್ರಾಳಿ ಸೇತುವೆ ಸೇರಿದಂತೆ ಪ್ರಮುಖ ಯೋಜನೆಗಳ ಪೂರ್ಣಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸಂಕಲ್ಪ

Date:

ಉಡುಪಿ: ಮಲ್ಪೆಯಿಂದ ಆಗುಂಬೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169A ರ ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ಹೆದ್ದಾರಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಕಚೇರಿಯಿಂದ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಸಂಸದರು ಕಾಮಗಾರಿಯ ಪ್ರತಿಯೊಂದು ಹಂತವನ್ನೂ ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಮತ್ತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.

ಇಂದ್ರಾಳಿ ಮೇಲ್ಸೇತುವೆಯ ವಿಷಯದ ಬಗ್ಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಈ ಯೋಜನೆ ವಿಳಂಬವಾದಾಗ ಸಾರ್ವಜನಿಕರಿಂದ ನಿರಂತರ ಪ್ರತಿಭಟನೆಗಳು ಮತ್ತು ವಿಮರ್ಶೆಗಳು ವ್ಯಕ್ತವಾಗಿದ್ದವು. ಈ ಸಂದರ್ಭದಲ್ಲಿ, ಅವರು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಹಲವಾರು ಬಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗೆ ವೇಗ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ವಿವರಿಸಿದರು. ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರು ಮತ್ತು ಇಂಜಿನಿಯರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಗರ್ಡರ್ ಅಳವಡಿಕೆಗೆ ಕಾಲಮಿತಿ ನಿಗದಿಪಡಿಸಿದ್ದು, ಇದು ಸರ್ಕಾರಿ ವ್ಯವಸ್ಥೆಯಲ್ಲಿಯೇ ಒಂದು ಹೊಸ ಕ್ರಮ ಎಂದು ಅವರು ಬಣ್ಣಿಸಿದರು. ಇಂದು ಕೂಡ ಇಂದ್ರಾಳಿಗೆ ಭೇಟಿ ನೀಡಿ, ಕಾಂಕ್ರೀಟೀಕರಣದ ಕೆಲಸವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಇಂಜಿನಿಯರ್‌ಗಳಿಗೆ ಸೂಚಿಸಿರುವುದಾಗಿ ಸಂಸದರು ತಿಳಿಸಿದರು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗಳ ಮಹತ್ವವನ್ನು ಅರಿತು, ವಿರೋಧಿಸುವವರೂ ಮೆಚ್ಚುವಂತೆ ಕಾಮಗಾರಿಯನ್ನು ಮುಗಿಸುವುದು ತಮ್ಮ ಆದ್ಯತೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಮಲ್ಪೆ-ಆದಿಉಡುಪಿ ವಿಭಾಗದ ಕಾಮಗಾರಿಯ ಕುರಿತು ಮಾಹಿತಿ ನೀಡಿದ ಸಂಸದರು, ಸುಮಾರು 1 ವರ್ಷದಿಂದ ಈ ಭಾಗದಲ್ಲಿ ಕಾಮಗಾರಿ ನಡೆಯುತ್ತಿದೆ. ಇಲ್ಲಿಯವರೆಗೆ 135 ಭೂಮಾಲಕರಿಗೆ ಸುಮಾರು 24.86 ಕೋಟಿ ರೂಪಾಯಿ ಪರಿಹಾರ ಹಣವನ್ನು ಪಾವತಿಸಲಾಗಿದೆ. ಭೂ ಸ್ವಾಧೀನದಲ್ಲಿ ತಕರಾರುಗಳಿದ್ದ ಸ್ಥಳಗಳಲ್ಲಿ, ಕಾಮಗಾರಿಗೆ ವೇಗ ನೀಡುವ ದೃಷ್ಟಿಯಿಂದ ತಾವು ಸ್ವತಃ ಅಧಿಕಾರಿಗಳೊಂದಿಗೆ ಹಲವು ಬಾರಿ ಭೇಟಿ ನೀಡಿದ್ದಾಗಿ ತಿಳಿಸಿದರು. ಇನ್ನೂ ದಾಖಲೆಗಳನ್ನು ಒದಗಿಸದ 70 ಭೂಮಾಲಕರನ್ನು ಸಂಪರ್ಕಿಸಿ, ನ್ಯಾಯಾಲಯದ ಮೂಲಕ ಪರಿಹಾರದ ಹಣವನ್ನು ಠೇವಣಿ ಇರಿಸಿ ಕಾಮಗಾರಿಯನ್ನು ಮುಂದುವರೆಸಲು ಪ್ರಯತ್ನಿಸಲಾಗುತ್ತಿದೆ. ಪ್ರಸ್ತುತ, ಮಲ್ಪೆ-ಕರಾವಳಿ ಜಂಕ್ಷನ್ ಕಾಮಗಾರಿ ಮತ್ತು ಭೂ ಪರಿಹಾರ ಚಟುವಟಿಕೆಗಳು ವೇಗವಾಗಿ ಸಾಗುತ್ತಿವೆ ಎಂದು ಅವರು ಹೇಳಿದರು.

ಪರ್ಕಳದಲ್ಲಿ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ವಿವರಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪರ್ಕಳದ ತಿರುವಿನ ನೇರಗೊಳಿಸುವಿಕೆ ಕೆಲಸ ನಡೆಯುತ್ತಿರುವಾಗ, 11 ಭೂಮಾಲಕರು ರಾಜ್ಯ ಉಚ್ಚ ನ್ಯಾಯಾಲಯದಿಂದ 2-3 ಬಾರಿ ತಡೆಯಾಜ್ಞೆ ತಂದಿರುವುದನ್ನು ಸ್ಮರಿಸಿದರು. ಸದ್ಯದಲ್ಲೇ ಈ ತಡೆಯಾಜ್ಞೆ ತೆರವಾಗುವ ವಿಶ್ವಾಸವಿದ್ದು, ನ್ಯಾಯಾಲಯದ ತಡೆಯಾಜ್ಞೆ ತೆರವಾಗುತ್ತಿದ್ದಂತೆಯೇ ಕಾಮಗಾರಿ ಪುನರಾರಂಭಗೊಳ್ಳಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಕಲ್ಯಾಣಪುರದ ಅಂಡರ್‌ಪಾಸ್ ಕುರಿತು ಮಾತನಾಡಿದ ಅವರು, ಈ ಯೋಜನೆಯ ಬಗ್ಗೆ ರಾಜಕೀಯ ಉದ್ದೇಶದಿಂದ ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಈಗ ರಸ್ತೆ ಸಂಚಾರವು ಸುಗಮವಾಗಿದ್ದು, ಎರಡೂ ಕಡೆಯ ಮೇಲ್ಸೇತುವೆಗಳಿಗೆ ಡಾಂಬರೀಕರಣ ಮಾಡಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂಬುದನ್ನು ಎಲ್ಲರೂ ಗಮನಿಸಬೇಕು ಎಂದು ಅವರು ಹೇಳಿದರು. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.