ಮಲ್ಪೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಸಾವು

Date:

spot_img
Drowning-

ಮಲ್ಪೆ: ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬೋಟಿನಿಂದ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟಿರುವ ಕರುಣಾಜನಕ ಘಟನೆ ಮಲ್ಪೆ ಸಮುದ್ರ ವ್ಯಾಪ್ತಿಯಲ್ಲಿ ಸಂಭವಿಸಿದೆ. ಉಡುಪಿಯ ಈಶ್ವರನಗರ ನಿವಾಸಿ ರಮೇಶ್ ಮೆಂಡನ್ (66) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಮಾರ್ಚ್ 5 ರಂದು ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ರಮೇಶ್ ಮೆಂಡನ್ ಅವರು ಸಹೋದ್ಯೋಗಿಗಳೊಂದಿಗೆ ಸಮುದ್ರ ಮಧ್ಯೆ ಮೀನುಗಾರಿಕೆಯಲ್ಲಿ ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ. ಕೆಲಸದ ನಡುವೆ ಆಯತಪ್ಪಿ ಅವರು ನೀರಿಗೆ ಬಿದ್ದಿದ್ದನ್ನು ಗಮನಿಸಿದ ಕೂಡಲೇ ಬೋಟಿನಲ್ಲಿದ್ದ ಇತರ ಮೀನುಗಾರರು ಅವರನ್ನು ರಕ್ಷಿಸಿ ಮೇಲೆಕ್ಕೆತ್ತಿದ್ದಾರೆ. ತಕ್ಷಣವೇ ಆಂಬುಲೆನ್ಸ್ ಮೂಲಕ ಉಡುಪಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

ಸುಮಾರು 66 ವರ್ಷ ಪ್ರಾಯದ ರಮೇಶ್ ಅವರು ದೀರ್ಘಕಾಲದಿಂದ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಈ ಘಟನೆ ಮೀನುಗಾರಿಕಾ ವಲಯದಲ್ಲಿ ಶೋಕದ ಛಾಯೆ ಮೂಡಿಸಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.