spot_img

ಮಲ್ಪೆಯ ಸೇಂಟ್ ಮೇರಿ ದ್ವೀಪಕ್ಕೆ ಪ್ರವೇಶಕ್ಕೆ 4 ತಿಂಗಳ ನಿಷೇಧ

Date:

spot_img

ಮಲ್ಪೆ: ಮಳೆಗಾಲದ ಅಪಾಯಕಾರಿ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು, ಮಲ್ಪೆಯ ಸೇಂಟ್ ಮೇರಿ ದ್ವೀಪಕ್ಕೆ ಪ್ರವೇಶ ಮತ್ತು ಜಲಕ್ರೀಡೆಗಳಿಗೆ ನಾಲ್ಕು ತಿಂಗಳ ನಿಷೇಧಾರ್ಥ ಜಾರಿಗೆ ತರಲಾಗಿದೆ. ಈ ನಿರ್ಬಂಧವು ಮೇ 15 ರಿಂದ ಸೆಪ್ಟೆಂಬರ್ 15 ವರೆಗೆ ಜಾರಿಯಲ್ಲಿರುತ್ತದೆ.

ಪ್ರತಿವರ್ಷದಂತೆ ಈ ಬಾರಿಯೂ ಮಳೆಗಾಲದಲ್ಲಿ ಸಮುದ್ರದ ಅಲೆಗಳು ಪ್ರಬಲವಾಗಿರುವ ಕಾರಣದಿಂದಾಗಿ ದ್ವೀಪಕ್ಕೆ ಹೋಗುವ ಪ್ರವಾಸಿಗರ ಸುರಕ್ಷತೆಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಪಶ್ಚಿಮ ಕರಾವಳಿಯಲ್ಲಿ ಈ ಅವಧಿಯಲ್ಲಿ ಬೋಟ್‌ಗಳು ಮತ್ತು ಇತರ ಜಲವಾಹನಗಳನ್ನು ನಡೆಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಾವಳಿಗಳ ಪ್ರಕಾರ ಈ ನಿರ್ಬಂಧವನ್ನು ಜಾರಿಗೆ ತರಲಾಗಿದೆ.

ಪ್ರವಾಸೋದ್ಯಮ ಇಲಾಖೆಯ ಸಹ ನಿರ್ದೇಶಕ ಚಂದ್ರಶೇಖರ್ ಅವರು, “ಸಮುದ್ರದ ಪರಿಸ್ಥಿತಿ ಅನುಕೂಲವಾಗಿದ್ದರೆ, ಜೂನ್ 1ರವರೆಗೆ ಮಾತ್ರ ನೀರಿನ ಚಟುವಟಿಕೆಗಳಿಗೆ ಅವಕಾಶ ನೀಡಬಹುದು. ಆನಂತರ, ಬೀಚ್ ಪ್ರದೇಶದಲ್ಲಿ ಸುರಕ್ಷತೆಗಾಗಿ ತಡೆಬೇಲಿ ಹಾಕಲಾಗುವುದು” ಎಂದು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಸಮುದ್ರದ ಅಲೆಗಳು ಅತಿ ಹೆಚ್ಚು ಪ್ರಬಲವಾಗಿರುವುದರಿಂದ, ಪ್ರವಾಸಿಗರು ಮತ್ತು ಸ್ಥಳೀಯರು ನಿಯಮಗಳನ್ನು ಪಾಲಿಸಿ ಸುರಕ್ಷಿತವಾಗಿರುವಂತೆ ಅಧಿಕಾರಿಗಳು ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ