
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್ನಲ್ಲಿ ತಂಗಿದ್ದ ಅನ್ಯ ಕೋಮಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ತಯಾರಿಸಿದ್ದು ಬಯಲಾಗಿದೆ.
ಬಂಧಿತ ಆರೋಪಿಯನ್ನು ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಮೂಲದ 42 ವರ್ಷದ ಅಬ್ದುಲ್ ಸಮದ್ ಎಂದು ಗುರುತಿಸಲಾಗಿದೆ. ಈತ ಶೃಂಗೇರಿ ಮೂಲದ 38 ವರ್ಷದ ಹಿಂದೂ ಮಹಿಳೆಯೊಂದಿಗೆ ಲಾಡ್ಜ್ಗೆ ಹೋಗಿದ್ದು, ತಾವು ಪತಿ-ಪತ್ನಿ ಎಂದು ಹೇಳಿ ರೂಮ್ ಪಡೆದಿದ್ದನು.
ಆದರೆ, ಲಾಡ್ಜ್ ಸಿಬ್ಬಂದಿಗೆ ಅನುಮಾನ ಬಂದು ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸಿದಾಗ, ಅಬ್ದುಲ್ ಸಮದ್ ತನ್ನ ಅಸಲಿ ಹೆಸರನ್ನು ಬದಲಿಸಿ ‘ರಮೇಶ್’ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದು ಗೊತ್ತಾಗಿದೆ. ತಕ್ಷಣವೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಶೃಂಗೇರಿ ಪೊಲೀಸರು ಅಬ್ದುಲ್ ಸಮದ್ ಮತ್ತು ಆತನ ಜೊತೆಗಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈತ ಬೇರೆ ಕೋಮಿನ ವ್ಯಕ್ತಿಯಾಗಿದ್ದು, ಮಹಿಳೆಯೊಂದಿಗೆ ಸಂಬಂಧ ಬೆಳೆಸಲು ಹಿಂದೂ ಹೆಸರಿನಲ್ಲಿ ಗುರುತಿನ ಚೀಟಿ ನಕಲಿ ಮಾಡಿಸಿಕೊಂಡಿದ್ದು ದೃಢಪಟ್ಟಿದೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



































