ಬಂಟ್ವಾಳದ ಇರಾಕೋಡಿಯಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ – ಸಹಚರನಿಗೂ ಗಂಭೀರ ಗಾಯ

Date:

spot_img

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಸೋಮವಾರ (ಮೇ 27) ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಕೊಳತ್ತಮಜಲು ನಿವಾಸಿ ಹಾಗೂ ಪಿಕಪ್ ಚಾಲಕನ ಸಹೋದರ ರಹೀಮ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರಹೀಮ್ ಇಂದು ಬೆಳಿಗ್ಗೆ ಇರಾಕೋಡಿಯಲ್ಲಿರುವ ಪ್ರದೇಶದಲ್ಲಿ ಪಿಕಪ್ ವಾಹನದಿಂದ ಮರಳು ಅನ್‌ಲೋಡ್ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ತೀವ್ರವಾದ ದಾಳಿ ನಡೆಸಿ ರಹೀಮನ್ನು ಸ್ಥಳದಲ್ಲೇ ಕಡಿದು ಪರಾರಿಯಾಗಿದ್ದಾರೆ. ಈ ಸಮಯದಲ್ಲಿ ರಹೀಮ್ ಜೊತೆ ಇದ್ದ ಮತ್ತೊಬ್ಬ ವ್ಯಕ್ತಿಗೂ ಕಡಿದ ಗಾಯವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ವ್ಯಕ್ತಿಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

ಘಟನೆಯ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಹಾಗೂ ಮುಂದಿನ ಕಾನೂನು ಕ್ರಮಗಳನ್ನು ಕೈಗೆತ್ತಿಕೊಂಡಿದ್ದಾರೆ. ಹತ್ಯೆಯ ಹಿನ್ನೆಲೆ ಹಾಗೂ ದಾಳಿ ನಡೆಸಿದವರ ಗುರುತು ಪತ್ತೆ ಹಚ್ಚುವ ಕೆಲಸ ಮುಂದುವರೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.