
ಉಡುಪಿ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜೈಪುರ ಗ್ರಾಮದಲ್ಲಿ ಜೂನ್ 11ರಂದು ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯು ಉಡುಪಿ ಜಿಲ್ಲೆಯ ಬನ್ನಂಜೆ ಮೂಲದವರೆಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಜೈಪುರ ಠಾಣೆ ಪೊಲೀಸರು ಉಡುಪಿ ಅಂಬಲಪಾಡಿಯ ವಿಶು ಶೆಟ್ಟಿ ಅವರಿಗೆ ಮಾಹಿತಿ ನೀಡಿದ್ದಾರೆ.
ಪತ್ತೆಯಾದ ಮೃತದೇಹದ ಪ್ರಾಥಮಿಕ ತನಿಖೆಯಲ್ಲಿ, ಮೃತ ವ್ಯಕ್ತಿಯು ಸುಂದರ ಅಥವಾ ವರ್ಧಮಾನ ಎಂಬ ಹೆಸರಿನಲ್ಲಿ ಗುರುತಿಸಲ್ಪಟ್ಟಿದ್ದರೂ, ಅವರ ನಿಖರ ಗುರುತನ್ನು ದೃಢಪಡಿಸಲು ಇನ್ನೂ ಸಂಬಂಧಿಕರ ಸಹಕಾರ ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಸಂಬಂಧಿಕರು ಅಥವಾ ಪರಿಚಿತರು ಯಾರಾದರೂ ಇದ್ದರೆ, ತಕ್ಷಣವೇ ಜೈಪುರ ಪೊಲೀಸ್ ಠಾಣೆ ಅಥವಾ ಮೊಬೈಲ್ ಸಂಖ್ಯೆ 8277990582 ಅನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಪೊಲೀಸರು ಮೃತದೇಹದ ಚಿತ್ರವನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರಿಂದ ಸಹಕಾರ ಕೋರಿದ್ದಾರೆ. ಸಂಬಂಧಿಕರ ಪತ್ತೆಯಾಗದ ವರೆಗೆ ಮೃತದೇಹವನ್ನು ಜೈಪುರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.