ಡ್ರಗ್ಸ್ ವಿರುದ್ಧ ಮಂಗಳೂರು ಕಮಿಷನರ್ ಸಮರ: ಎಂಡಿಎಂಎ ಮಾರುತ್ತಿದ್ದ 8 ವಿದ್ಯಾರ್ಥಿಗಳ ಬಂಧನ!

Date:

spot_img

ಮಂಗಳೂರು : ಮಂಗಳೂರು ನಗರದಲ್ಲಿ ಡ್ರಗ್ಸ್ ದಂಧೆ ಮಟ್ಟಹಾಕಲು ಕಮಿಷನರ್ ಅನುಪಮ್ ಅಗರವಾಲ್ ಅವರು ನಡೆಸುತ್ತಿರುವ ನಿರಂತರ ಪ್ರಯತ್ನಗಳು ಫಲ ನೀಡಿದ್ದು, ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ 8 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ವಿದ್ಯಾರ್ಥಿಗಳು ಡ್ರಗ್ಸ್ ಜಾಲದಲ್ಲಿ ಸಿಲುಕುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿ ಕಮಿಷನರ್ ವಿಡಿಯೋ ಮೂಲಕ ಖಡಕ್ ವಾರ್ನಿಂಗ್ ನೀಡಿದ್ದರು.

ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಚರಣೆಗಿಳಿದ ಪಾಂಡೇಶ್ವರ ಇನ್ಸ್‌ಪೆಕ್ಟರ್ ಗುರುರಾಜ್ ನೇತೃತ್ವದ ತಂಡ, ಬಂದರು ಧಕ್ಕೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಎಂಟು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದೆ. ಬಂಧಿತರೆಲ್ಲರೂ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.

ಬಂಧಿತ ವಿದ್ಯಾರ್ಥಿಗಳನ್ನು ಕೇರಳ ಮೂಲದ ರಾಹುಲ್, ಸಂಗೀತ್ ಕೃಷ್ಣ, ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್, ರಿಚರ್ಡ್ ಮತ್ತು ಅನುರಾಗ್ ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಂಗಳೂರು ನಗರದಲ್ಲಿ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಪೊಲೀಸರು ಬದ್ಧರಾಗಿದ್ದಾರೆ ಎಂಬುದಕ್ಕೆ ಈ ಕಾರ್ಯಾಚರಣೆ ಮತ್ತೊಂದು ನಿದರ್ಶನವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ