ಖತರ್-ಬಹರೈನ್ ವಾಯುಪ್ರದೇಶ ಮುಚ್ಚಿದ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಅಡಚಣೆ

Date:

spot_img

ಮಂಗಳೂರು : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ, ಖತರ್‌ನಲ್ಲಿರುವ ಅಮೆರಿಕದ ವಾಯುನೆಲೆಯಲ್ಲಿ ನಡೆದ ದಾಳಿಯ ಪರಿಣಾಮವಾಗಿ ಖತರ್ ಮತ್ತು ಬಹರೈನ್ ತಮ್ಮ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ. ಈ ನಿರ್ಧಾರದ ಪರಿಣಾಮ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಗಲ್ಫ್ ಗಮ್ಯಸ್ಥಾನಗಳ ವಿಮಾನಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ.

ಮೂಲಗಳ ಮಾಹಿತಿ ಪ್ರಕಾರ, ಮಂಗಳೂರಿನಿಂದ ದಮಾಮ್‌ಗೆ ಹೊರಡುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಮಧ್ಯದಲ್ಲಿ ಮಸ್ಕತ್‌ಗೆ ತಿರುಗಿಸಲಾಗಿದ್ದು, ಅಬುಧಾಬಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಮಸ್ಕತ್‌ಗೆ ತಿರುಗಿಸಲಾದ ವಿಮಾನದಲ್ಲಿನ ಪ್ರಯಾಣಿಕರು ಈಗಾಗಲೇ ಹಲವು ಗಂಟೆಗಳ ಕಾಲ ವಿಮಾನದಲ್ಲೇ ಇಳಿಯದೆ ಕಾಯುತ್ತಿದ್ದಾರೆ. ಅವರು ಹೊರಬರಲು ಸ್ಥಳೀಯ ಅಧಿಕಾರಿಗಳ ಅನುಮತಿ ಇನ್ನೂ ಲಭ್ಯವಾಗಿಲ್ಲ.

ವಿಮಾನ ಸಂಸ್ಥೆಗಳು ಪ್ರಯಾಣಿಕರೊಂದಿಗೆ ನೇರ ಸಂಪರ್ಕದಲ್ಲಿದ್ದು, ಮುಂದಿನ ತೀರ್ಮಾನಗಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಿವೆ. ಇದೇ ಸಮಯದಲ್ಲಿ , ಪ್ರಯಾಣಿಕರಿಗೆ ತಮ್ಮ ಪ್ರಯಾಣದ ಸ್ಥಿತಿಯನ್ನು ವಿಮಾನಯಾನ ಸಂಸ್ಥೆಗಳ ಮೂಲಕ ಪೂರ್ವದಲ್ಲಿ ಖಚಿತಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.