spot_img

ದಕ್ಷಿಣ ಕನ್ನಡ : ಜಾನುವಾರು ಹತ್ಯೆ ಪ್ರಕರಣ – 3 ಆರೋಪಿಗಳ ಆಸ್ತಿ, ಕಟ್ಟಡಗಳು ಜಪ್ತಿ!

Date:

spot_img
spot_img

ಮಂಗಳೂರು: ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರು ಹತ್ಯೆ ಆರೋಪದ ಮೇಲೆ 3 ಆರೋಪಿಗಳಿಗೆ ಸಂಬಂಧಿಸಿದ ಆಸ್ತಿ ಮತ್ತು ಕಟ್ಟಡಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಹಾಯಕ ಕಮೀಷನರ್ ಅವರ ಅಧಿಕೃತ ಆದೇಶದ ಮೇರೆಗೆ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಜಿಲ್ಲೆಯ 3 ಪ್ರತ್ಯೇಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಜಪ್ತಿ ಮಾಡಲಾದ ಆಸ್ತಿಗಳ ವಿವರ ಈ ಕೆಳಗಿನಂತಿದೆ:

  1. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ: ಸಂಗಬೆಟ್ಟು ಗ್ರಾಮದ ಕೆರೆಬಳಿ ಪ್ರದೇಶದಲ್ಲಿ ನಾಸೀರ್ ಮತ್ತು ಇತರರು ಸೇರಿಕೊಂಡು ಇದಿನಬ್ಬ ಎಂಬುವವರ ಜಾಗದಲ್ಲಿ ಜಾನುವಾರು ವಧೆ ಕೃತ್ಯ ಎಸಗಿದ್ದರು. ಈ ಪ್ರಕರಣದಲ್ಲಿ, ಪೊಲೀಸರು ಇದಿನಬ್ಬ ಅವರಿಗೆ ಸೇರಿದ ವಾಸದ ಮನೆ, ಜಾನುವಾರು ವಧೆ ಮಾಡಲು ಬಳಸುತ್ತಿದ್ದ ಶೆಡ್ (ಕಸಾಯಿಖಾನೆ) ಹಾಗೂ ಜಾನುವಾರುಗಳನ್ನು ಕಟ್ಟಲು ಬಳಸುತ್ತಿದ್ದ ಶೆಡ್‌ಗಳನ್ನು ಜಪ್ತಿ ಮಾಡಿದ್ದಾರೆ.
  2. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿ: ಕುವೆಟ್ಟು ಗ್ರಾಮದಲ್ಲಿ ವಾಸವಿರುವ ಮಹಮ್ಮದ್ ರಫೀಕ್ ಎಂಬ ಆರೋಪಿಗೆ ಸೇರಿದ ಮನೆ ಹಾಗೂ ಖಾಲಿ ಜಾಗವನ್ನು ಸಹ ಕಾಯ್ದೆಯಡಿ ವಶಪಡಿಸಿಕೊಳ್ಳಲಾಗಿದೆ.
  3. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿ: ಜಾನುವಾರು ವಧೆ ಮಾಡಿ ಮಾಂಸ ಮಾರಾಟದಲ್ಲಿ ತೊಡಗಿದ್ದ ಮೊಹಮ್ಮದ್ ಮನ್ಸೂರ್ ಎಂಬ ಆರೋಪಿಗೆ ಸಂಬಂಧಿಸಿದ ಆಸ್ತಿಯನ್ನೂ ಜಪ್ತಿ ಮಾಡಲಾಗಿದೆ. ಈ ಆರೋಪಿಗೆ ಸೇರಿದ ಮಂಗಳೂರು ನಗರದ ಕುದ್ರೋಳಿ ಸಮೀಪದ ಜೆ.ಎಂ. ರಸ್ತೆಯಲ್ಲಿರುವ ಒಂದು ಕಟ್ಟಡವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾನೂನುಬಾಹಿರವಾಗಿ ಜಾನುವಾರು ಹತ್ಯೆ ನಡೆಸಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಆರೋಪಿಗಳ ಆಸ್ತಿಗಳ ಜಪ್ತಿ ಕಾರ್ಯವನ್ನು ನಡೆಸಲಾಗಿದೆ. ಜಿಲ್ಲಾ ಪೊಲೀಸರು ಜಾನುವಾರು ಹತ್ಯೆ ತಡೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿರುವುದನ್ನು ಈ ಕಾರ್ಯಾಚರಣೆ ಸ್ಪಷ್ಟಪಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಧನತ್ರಯೋದಶಿ

ದೀಪಾವಳಿ ಹಬ್ಬದ ಮೊದಲ ದಿನವಾದ ಧನತ್ರಯೋದಶಿ (ಧನತೇರಸ್‌) ಯನ್ನು, ಆಶ್ವಯುಜ ಮಾಸದ ಕೃಷ್ಣ ಪಕ್ಷದ 13ನೇ ದಿನದಂದು ಸಂಭ್ರಮದಿಂದ ಆಚರಿಸಲಾಗುತ್ತದೆ

ಸೀರೆಯ ಸೌಂದರ್ಯಕ್ಕೆ ಆಕಾರ ಮುಖ್ಯವಲ್ಲ: ಮಹಿಳೆಯರಿಗಾಗಿ ಸೀರೆಯ ವಿನ್ಯಾಸ ಮತ್ತು ಶೈಲಿಯ ವಿಶೇಷ ಮಾರ್ಗದರ್ಶಿ

ದೇಹದ ಗಾತ್ರ ಎಷ್ಟೇ ಇದ್ದರೂ, ಸರಿಯಾದ ಆಯ್ಕೆ ಮತ್ತು ಡ್ರೇಪಿಂಗ್ ತಂತ್ರಗಳಿಂದ ಪ್ರತಿ ಪ್ಲಸ್ ಸೈಜ್ ಮಹಿಳೆಯೂ ಸೀರೆಯಯಲ್ಲಿ ವಿಶ್ವಾಸ ಮತ್ತು ಆಕರ್ಷಣೆಯಿಂದ ಮಿಂಚಬಹುದು

ಶಿವಮೊಗ್ಗ: ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನ ವಿಚಾರಣೆ ಮತ್ತೆ ಆರಂಭ

ಧರ್ಮಸ್ಥಳ ಪರಿಸರದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು, ಪ್ರಮುಖ ಆರೋಪಿ ಚಿನ್ನಯ್ಯನನ್ನು ವಿಚಾರಣೆಗೊಳಪಡಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

‘ಹಿಂದೂ ಹುಡುಗಿಯರು ಜಿಮ್‌ಗೆ ಹೋಗಬಾರದು ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ

ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರಾದ ಗೋಪಿಚಂದ್ ಪಡಲ್ಕರ್ ಅವರು ಹಿಂದೂ ಸಮುದಾಯದ ಯುವತಿಯರ ಕುರಿತು ನೀಡಿರುವ ಹೇಳಿಕೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ