ಮಂಗಳೂರು ಜೈಲಿನಲ್ಲಿ ವಿಚಾರಣಾಧೀನ ಕೈದಿಗೆ ಹಲ್ಲೆ: ಐವರ ವಿರುದ್ಧ ಪ್ರಕರಣ ದಾಖಲು

Date:

spot_img
jail11

ಮಂಗಳೂರು: ನಗರದ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬನಿಗೆ ಅದೇ ಜೈಲಿನಲ್ಲಿರುವ ಇತರ ಐವರು ವಿಚಾರಣಾಧೀನ ಕೈದಿಗಳು ಸೇರಿ ಹಲ್ಲೆ ನಡೆಸಿದ ಘಟನೆ ರವಿವಾರ ವರದಿಯಾಗಿದೆ.

ಹಲ್ಲೆಗೊಳಗಾದವರನ್ನು ವಿಚಾರಣಾಧೀನ ಕೈದಿ ಮುಹಮ್ಮದ್ ಇರ್ಷಾದ್ ಕಾಂತಡ್ಕ ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳನ್ನು ನರಿಂಗಾನದ ನಿಝಾಮ್ (27), ಕಾಟಿಪಳ್ಳದ ಶಾಕಿಬ್ (33), ಬಜಾಲ್‌ನ ರಿಫತ್ ಅಲಿ (29), ತಿರುವೈಲು ಗ್ರಾಮದ ಇಮ್ರಾನ್ (40) ಮತ್ತು ಬಂದರ್ ನಿವಾಸಿ ಅಬ್ದುಲ್ ರಶೀದ್ (33) ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿವಿಧ ಪ್ರಕರಣಗಳಲ್ಲಿ ಮಂಗಳೂರು ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಾಗಿ ಬಂಧಿಗಳಾಗಿದ್ದಾರೆ.

ಹಲ್ಲೆಗೆ ಕಾರಣ ಮತ್ತು ಮಾಹಿತಿ ಬಯಲು

ಕೈದಿಗಳ ನಡುವೆ ಹಣಕಾಸಿನ ವಿಚಾರವಾಗಿ ಮಾತಿಗೆ ಮಾತು ಬೆಳೆದು ಈ ಸಂಘರ್ಷ ನಡೆದಿದೆ ಎನ್ನಲಾಗಿದೆ. ಆರೋಪಿಗಳು ಮುಹಮ್ಮದ್ ಇರ್ಷಾದ್‌ನನ್ನು ನೆಲಕ್ಕೆ ದೂಡಿಹಾಕಿ, ಕಾಲುಗಳಿಂದ ತುಳಿದು ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ.

ಜೈಲು ಅಧೀಕ್ಷಕರು ಕೈದಿಗಳ ಆರೋಗ್ಯ ವಿಚಾರಿಸುತ್ತಿದ್ದ ಸಂದರ್ಭ, ಇರ್ಷಾದ್ ತನಗೆ ಹೊಟ್ಟೆ ನೋವು ಇದೆ ಎಂದು ಹೇಳಿದ್ದಾನೆ. ಆಗ ಅನುಮಾನಗೊಂಡ ಜೈಲು ಅಧೀಕ್ಷಕರು ಆತನನ್ನು ಕಚೇರಿಗೆ ಕರೆಸಿ ವಿಚಾರಿಸಿದಾಗ, ಆತನ ಹೊಟ್ಟೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದು ಗಮನಕ್ಕೆ ಬಂದಿದೆ. ಈ ಕುರಿತು ವಿಚಾರಿಸಿದಾಗ ಆತ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ಜೈಲು ಅಧೀಕ್ಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಜೈಲು ಅಧೀಕ್ಷಕರ ದೂರಿನ ಮೇರೆಗೆ ಬರ್ಕೆ ಪೊಲೀಸರು ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.