spot_img

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮೇ 2ರಿಂದ 6ರವರೆಗೆ ನಿಷೇಧಾಜ್ಞೆ ಜಾರಿ

Date:

ಮಂಗಳೂರು: ಬಜಪೆ ತಾಲೂಕಿನ ಕಿನ್ನಿಪದವಿಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಹಿನ್ನೆಲೆ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಯನ್ನು ಹಿತವಾಗಿ ಪರಿಗಣಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಮೇ 2ರಿಂದ ಮೇ 6ರ ಬೆಳಿಗ್ಗೆ 6 ಗಂಟೆವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೆ ಆದೇಶಿಸಿದ್ದಾರೆ.

ಭದ್ರತೆ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ನಿರ್ಧರಿಸಲಾಗಿದ್ದು, ಈ ಆದೇಶ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ (ಭಾ.ನ್ಯಾಸು ಸಂ) ಸೆಕ್ಷನ್ 163 ರ ಪ್ರಕಾರ ಜಾರಿಗೊಂಡಿದೆ. ಈ ನಿರ್ಧಾರವನ್ನು ಕಮಿಷನರೇಟ್‌ನ ನಗರ ವಿಶೇಷ ವಿಭಾಗದ ಇನ್ಸ್ಪೆಕ್ಟರ್ ವರದಿ ಆಧರಿಸಿ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ನಿಷೇಧಾಜ್ಞೆಯ ಪ್ರಮುಖ ಅಂಶಗಳು:

  • ಐದು ಅಥವಾ ಹೆಚ್ಚು ಜನರು ಗುಂಪು ಸೇರುವಂತಿಲ್ಲ.
  • ಕೋಲು, ಕತ್ತಿ, ಚಾಕು, ಬಂದೂಕು, ಪಟಾಕಿ, ಸ್ಫೋಟಕಗಳು, ಆ್ಯಸಿಡ್ ಮುಂತಾದ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳುವುದು, ಸಾಗಿಸುವುದು, ಬಳಸುವುದು ಸಂಪೂರ್ಣ ನಿಷೇಧ.
  • ವ್ಯಕ್ತಿಗಳ ಪ್ರತಿಕೃತಿ ಸುಡುವುದು, ಕಲ್ಲುಗಳನ್ನು ಎಸೆದು ಹಾನಿ ಮಾಡುವ ಸಾಧನಗಳನ್ನು ಒಯ್ಯುವುದು, ಶೇಖರಿಸುವುದು ಅಥವಾ ತಯಾರಿಸುವುದು ನಿಷೇಧ.
  • ಸರ್ಕಾರಿ ಸಂಸ್ಥೆಗಳ ವಿರುದ್ಧ ನಿಂದನಾ ಘೋಷಣೆ, ಅವಾಚ್ಯ ಭಾಷೆ, ಪ್ರಚೋದನಾತ್ಮಕ ಭಾಷಣ, ಪ್ರತಿಭಟನೆ, ಗಾಯನ ಮುಂತಾದ ಚಟುವಟಿಕೆಗಳೂ ನಿಷೇಧಿಸಲಾಗಿದೆ.
  • ಯಾವುದೇ ವಿಧದ ಸಾರ್ವಜನಿಕ ಉತ್ಕ್ರೋಶ ವ್ಯಕ್ತಪಡಿಸುವ ಚಟುವಟಿಕೆಗಳನ್ನು ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಂಡಿದೆ.

ಹತ್ಯೆ ಹಿನ್ನೆಲೆಯಲ್ಲಿ ನಗರದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿರುವುದು ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದೇಶ ಉಲ್ಲಂಘಿಸುವವರು ಕಾನೂನಿನಡಿಯಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಇಲಾಖೆಯು ಎಚ್ಚರಿಕೆ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ!

ವಿಜಯವಾಡದ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹದ್ದು ಡಿಕ್ಕಿ ಹೊಡೆದ ಪರಿಣಾಮ, ವಿಮಾನದ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಹಾಸನದಲ್ಲಿ ದಸರಾ ಉದ್ಘಾಟನೆ ವಿವಾದ: ಭಾನು ಮುಷ್ತಾಕ್ ಮನೆಗೆ ತೆರಳಿ ‘ಆಹ್ವಾನ ತಿರಸ್ಕರಿಸಿ’ ಎಂದು ಮನವಿ

‘ರಾಷ್ಟ್ರ ರಕ್ಷಣಾ ಸೇನೆ’ ಎಂಬ ಸಂಘಟನೆಯ ಕಾರ್ಯಕರ್ತರು ಭಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ, ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದಾರೆ.

ಸಮೋಸಾ ತರದಿದ್ದಕ್ಕೆ ಗಂಡನ ಮೇಲೆ ಹಲ್ಲೆ: ಉತ್ತರ ಪ್ರದೇಶದಲ್ಲಿ ನಡೆದ ವಿಚಿತ್ರ ಘಟನೆ

ಸಮೋಸಾ ತರುವ ವಿಷಯದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ನಡೆದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಸೇರಿ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಆನಂದಪುರದಲ್ಲಿ ವರದಿಯಾಗಿದೆ.

ಕಾರ್ಕಳದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್ ಸುವರ್ಣ ಆಯ್ಕೆ

ಕಾರ್ಕಳ ತಾಲೂಕು ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಶೋಕ್ ಸುವರ್ಣ ಅವರನ್ನು ನೇಮಕ ಮಾಡಲಾಗಿದೆ.