
ಮಂಗಳೂರು: ನಗರದ ಹೊರವಲಯದ ಕಣ್ಣೂರಿನ ದಯಾಂಬು ಪ್ರದೇಶದ ವಸತಿ ಸಮುಚ್ಚಯವೊಂದರಲ್ಲಿ ಹೊರ ರಾಜ್ಯದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಕಂಕನಾಡಿ ನಗರ ಠಾಣೆಯ ಪೊಲೀಸರು ಓರ್ವ ಮಹಿಳೆ ಮತ್ತು ಓರ್ವ ಪುರುಷನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕು ಪುದು ನಿವಾಸಿ (30) ಮತ್ತು ಪಾವೂರು ಬದ್ರಿಯಾ ನಗರದ ಅಬ್ದುಲ್ ಲತೀಫ್ (38) ಎಂದು ಗುರುತಿಸಲಾಗಿದೆ.
ದಕ್ಷಿಣ ವಲಯ ಎಸಿಪಿ ವಿಜಯ ಕ್ರಾಂತಿ ಅವರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಸಂಜೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಉತ್ತರ ಪ್ರದೇಶ ಮೂಲದ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
































