spot_img

ಮಣಿಪಾಲದಲ್ಲಿ ಆನ್‌ಲೈನ್ ಹೋಟೆಲ್ ಬುಕ್ಕಿಂಗ್ ನೆಪದಲ್ಲಿ 26,000 ರೂ. ವಂಚನೆ !

Date:

spot_img

ಮಣಿಪಾಲ : ಆನ್‌ಲೈನ್‌ನಲ್ಲಿ ಹೋಟೆಲ್ ಬುಕ್ಕಿಂಗ್ ಮಾಡಿಸುತ್ತೇವೆ ಎಂಬ ನೆಪದಲ್ಲಿ ವಂಚನೆ ನಡೆದಿರುವ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೃದುಲಾ ಜಿ ಶೇಟ್ (46) ಎಂಬವರು ಫೆಬ್ರವರಿ 12 ರಂದು ಈ ವಂಚನೆಗೆ ಬಲಿಯಾಗಿದ್ದಾರೆ.

ಮೃದುಲಾ ಅವರು ಇಂಟರ್ನೆಟ್‌ನಲ್ಲಿ ಹೋಟೆಲ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದಾಗ, ತುಶಾರ್ ಮೌರ್ಯ ಎಂಬಾತ ವಾಟ್ಸಾಪ್‌ ಮೂಲಕ ಸಂಪರ್ಕಿಸಿ, ಒಂದು ಕೋಡ್ ಮೂಲಕ ಪಾವತಿ ಮಾಡಬೇಕು ಎಂದು ತಿಳಿಸಿದ್ದ. ಅದರನ್ವಯ, ಮೃದುಲಾ ತಮ್ಮ ಬ್ಯಾಂಕ್ ಖಾತೆಯಿಂದ ₹20,000 ಪಾವತಿಸಿದ್ದರು. ನಂತರ ತಮ್ಮ ಮಗನ ಖಾತೆಯಿಂದ ಕೂಡ ₹6,000 ಪಾವತಿ ಮಾಡಿಸಿದ್ದರು.

ಆದರೆ ಬುಕಿಂಗ್ ಖಾತರಿ ಆಗದೆ, ಯಾರಿಂದಲೂ ಪ್ರತಿಕ್ರಿಯೆ ದೊರಕದ ಹಿನ್ನೆಲೆಯಲ್ಲಿ ಮೃದುಲಾ ಅವರಿಗೆ ಇದು ವಂಚನೆ ಎಂಬುದು ಸ್ಪಷ್ಟವಾಗಿದೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಂದಡಿ ದೂರು ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸದ್ಭಾವನಾ ದಿವಸ್

ಇಂದು ದೇಶಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಯ ಮಹತ್ವವನ್ನು ಎತ್ತಿ ಹಿಡಿಯುವ ಸದ್ಭಾವನಾ ದಿವಸವನ್ನು ಆಚರಿಸಲಾಗುತ್ತದೆ

1995 ರ ನಂತರದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲು ಗಮನ ಸೆಳೆಯುವ ಸೂಚನೆ ಮಂಡಿಸಿ ಯಶಸ್ವಿಯಾದ ವಿ ಪ ಸದಸ್ಯ ಶಶೀಲ್ ಜಿ ನಮೋಶಿ

1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಗಮನ ಸೆಳೆಯುವ ಸೂಚನೆ ಮಂಡಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಂದ ಅನುದಾನ ನೀಡುವ ಭರವಸೆ ಪಡೆಯುವಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಯಶಸ್ವಿಯಾದರು.

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌ ಮಾಡಿದ್ದಾರೆ.

ಹೈಪೊಗ್ಲಿಸಿಮಿಯಾ: ಹಠಾತ್ ರಕ್ತದ ಸಕ್ಕರೆ ಇಳಿಕೆ ಅತ್ಯಂತ ಅಪಾಯಕಾರಿ – ತಜ್ಞರ ಎಚ್ಚರಿಕೆ

ಇದ್ದಕ್ಕಿದ್ದಂತೆ ರಕ್ತದಲ್ಲಿ ಸಕ್ಕರೆಯ ಪ್ರಮಾಣ ನಿಯಮಿತ ಮಟ್ಟಕ್ಕಿಂತಲೂ ಕಡಿಮೆಯಾದರೆ ಅದು ಹೆಚ್ಚು ಅಪಾಯಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು.