ವಿಪರೀತ ಹೊಟ್ಟೆನೋವಿನಿಂದ ವಿವಾಹಿತ ಮಹಿಳೆ ಸಾವು; ಮರೋಡಿಯಲ್ಲಿ ದುರ್ಘಟನೆ

Date:

spot_img

ಬೆಳ್ತಂಗಡಿ: ವಿಪರೀತ ಹೊಟ್ಟೆನೋವಿನಿಂದ ವಿವಾಹಿತ ಮಹಿಳೆಯೊಬ್ಬರು ಅಚಾನಕ್ಕಾಗಿ ಮೃತಪಟ್ಟ ಘಟನೆ ಮರೋಡಿ ಗ್ರಾಮದಲ್ಲಿ ಸೋಮವಾರ (ಜುಲೈ 28, 2025) ನಡೆದಿದೆ.

ಮೃತಪಟ್ಟವರನ್ನು ಮರೋಡಿ ಗ್ರಾಮದ ಮೂಕಾಂಬಿಕಾ ನಿಲಯ, ಪಚ್ಚಡಿ ಮನೆಯ 26 ವರ್ಷದ ವಾಣಿಶ್ರೀ ಎಂದು ಗುರುತಿಸಲಾಗಿದೆ. ವಾಣಿಶ್ರೀ ಅವರಿಗೆ ಕಳೆದೊಂದು ವರ್ಷದ ಹಿಂದೆ ಮದುವೆಯಾಗಿತ್ತು. ಅವರು ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದರು ಎಂದು ತಿಳಿದುಬಂದಿದೆ.

ವಾಣಿಶ್ರೀ ಅವರಿಗೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಾಗ, ಪಕ್ಕದ ಮನೆಗೆ ತೆರಳಿದ್ದ ಅವರ ದೊಡ್ಡಮ್ಮನವರಿಗೆ ಅನುಮಾನ ಬಂದು ತಕ್ಷಣ ಅವರ ಪತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಎಲ್ಲರ ಸಹಾಯದಿಂದ ವಾಣಿಶ್ರೀಯವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ಪತಿ ಪ್ರಶಾಂತ್, ತಂದೆ ರಾಜು, ತಾಯಿ ಪ್ರೇಮ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.