spot_img

ಮಾಸ್ಕ್‌ಮ್ಯಾನ್‌ ಬಾಯಿಂದ ಹೊರಬಿತ್ತು ಸ್ಫೋಟಕ ಸತ್ಯ: ಧರ್ಮಸ್ಥಳದ ವಿರುದ್ಧ ಸುಳ್ಳು ಹೇಳಿಕೆ ನೀಡಲು ₹4 ಲಕ್ಷ ಲಂಚ ನೀಡಿದವರ ವಿರುದ್ಧ ತನಿಖೆ

Date:

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ದೂರುದಾರನಾದ ಚಿನ್ನಯ್ಯ ಅಲಿಯಾಸ್ ಮಾಸ್ಕ್‌ಮ್ಯಾನ್ ಮಾಡಿದ್ದ ಆರೋಪ ಈಗ ಹೊಸ ತಿರುವು ಪಡೆದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ಮುಂದೆ, ತಾನು ಹಣದ ಆಮಿಷ ಹಾಗೂ ಜೀವ ಬೆದರಿಕೆಯಿಂದ ಈ ರೀತಿ ಸುಳ್ಳು ಹೇಳಿದ್ದಾಗಿ ಚಿನ್ನಯ್ಯ ಒಪ್ಪಿಕೊಂಡಿದ್ದಾನೆ.

ತಲೆ ಬುರುಡೆ ಎಲ್ಲಿಂದ ತಂದಿದ್ದು ಎಂಬ ಕುರಿತು ವಿಚಾರಣೆ ನಡೆಸಿದಾಗ, ಚಿನ್ನಯ್ಯ ಮೊದಲಿಗೆ ತಂದಿದ್ದ ತಲೆ ಬುರುಡೆಯ ಮೂಲ ಯಾವುದು ಎಂಬುದು ಎಸ್‌ಐಟಿ ಅಧಿಕಾರಿಗಳಿಗೆ ತಿಳಿದುಬಂದಿದೆ. ಇದರ ಜೊತೆಗೆ, ಧರ್ಮಸ್ಥಳದ ವಿರುದ್ಧ ಸುಳ್ಳು ಹೇಳಿಕೆ ನೀಡಲು ಕೆಲವು ವ್ಯಕ್ತಿಗಳು ಚಿನ್ನಯ್ಯಗೆ ಹಣದ ಆಮಿಷ ಒಡ್ಡಿದ್ದರು ಎಂಬ ಸತ್ಯವನ್ನು ಆತ ಬಾಯ್ಬಿಟ್ಟಿದ್ದಾನೆ.

ಲಂಚ ಮತ್ತು ಜೀವ ಬೆದರಿಕೆಯ ಜಾಲ:

ಚಿನ್ನಯ್ಯನ ಹೇಳಿಕೆಯ ಪ್ರಕಾರ, ಹಂತ ಹಂತವಾಗಿ ಆತನಿಗೆ ಸುಮಾರು 3.5 ಲಕ್ಷದಿಂದ 4 ಲಕ್ಷ ರೂಪಾಯಿಯವರೆಗೆ ಹಣ ನೀಡಲಾಗಿದೆ. ಸುಳ್ಳು ಹೇಳಿಕೆಗಳನ್ನು ಹೇಳಿಕೊಟ್ಟು, ಅದನ್ನು ಮಾಧ್ಯಮಗಳ ಮುಂದೆ ಹೇಳುವಂತೆ ಪ್ರಚೋದಿಸಲಾಗಿದೆ. ಒಂದು ಹಂತದಲ್ಲಿ ಈ ಕಾರ್ಯದಿಂದ ದೂರ ಸರಿಯಲು ಚಿನ್ನಯ್ಯ ನಿರ್ಧರಿಸಿದಾಗ, ಆತನಿಗೆ ಜೀವ ಬೆದರಿಕೆ ಹಾಕಲಾಗಿದೆ.

“ನೀನು ನಾವು ಹೇಳಿದಂತೆ ಕೇಳದಿದ್ದರೆ, ನಿನ್ನ ವಿರುದ್ಧವೇ ಪ್ರಕರಣ ದಾಖಲಿಸಿ ಜೀವಾವಧಿ ಶಿಕ್ಷೆ ಆಗುವಂತೆ ಮಾಡುತ್ತೇವೆ ಎಂದು ಬೆದರಿಸಿದರು. ಇಲ್ಲವಾದರೆ, ಜನರೇ ನಿನಗೆ ಹೊಡೆದು ಹಾಕುತ್ತಾರೆಂದು ಹೆದರಿಸಿದರು,” ಎಂದು ಚಿನ್ನಯ್ಯ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ.

ಚಿನ್ನಯ್ಯನ ಈ ಸ್ಫೋಟಕ ಹೇಳಿಕೆಯ ನಂತರ, ಎಸ್‌ಐಟಿ ಅಧಿಕಾರಿಗಳು ಸುಳ್ಳು ಆರೋಪಗಳಿಗೆ ಹಣ ನೀಡಿ ಪ್ರಚೋದಿಸಿದ ಮತ್ತು ಜೀವ ಬೆದರಿಕೆ ಹಾಕಿದ ವ್ಯಕ್ತಿಗಳ ಕುರಿತು ತೀವ್ರ ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣ ಕೇವಲ ಸುಳ್ಳು ಆರೋಪಕ್ಕೆ ಸೀಮಿತವಾಗಿಲ್ಲದೆ, ಅದರ ಹಿಂದಿನ ಬೃಹತ್ ಷಡ್ಯಂತ್ರದ ಜಾಲವನ್ನು ಬಯಲಿಗೆಳೆಯುವತ್ತ ಸಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.