spot_img

ಯುವ ಜನತೆ ಹೆಚ್ಚೆಚ್ಚು ರಕ್ತದಾನಕ್ಕೆ ಮುಂದಾಗಿ : ಡಾ.ವೀಣಾ ಕುಮಾರಿ ; ಮಲಬಾರ್ ಗೋಲ್ಡ್‌ನಿಂದ ಬೃಹತ್ ರಕ್ತದಾನ ಶಿಬಿರ

Date:

spot_img

ಉಡುಪಿ, ಜು.31: 18 ವರ್ಷಕ್ಕೆ ಮತದಾನದ ಹಕ್ಕನ್ನು ಪಡೆಯುವ ನಮ್ಮ ಯುವಜನತೆ ಅದರೊಂದಿಗೆ ರಕ್ತದಾನದ ಹಕ್ಕನ್ನೂ ಪಡೆಯುತ್ತಾರೆ. ಇದನ್ನು ಸದುಪಯೋಗ ಪಡಿಸಿಕೊಂಡು ಯುವಜನತೆ ವರ್ಷಕ್ಕೆ ಕನಿಷ್ಠ ಎರಡು ಬಾರಿ ರಕ್ತದಾನಕ್ಕೆ ಮುಂದಾಗಬೇಕು. ಇದರಿಂದ ಅಮೂಲ್ಯ ಜೀವವನ್ನು ಉಳಿಸಲು ಸಾದ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ವೀಣಾಕುಮಾರಿಯವರು ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ 12 ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಗುರುವಾರ ಸಂಸ್ಥೆಯಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರರಾದ ಸುರೇಂದ್ರ ಶೆಟ್ಟಿ, ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರದ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ ಹಾಗೂ ಉಡುಪಿ ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರಾಂಕ್ಲಿ ಡಿಸೋಜ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿದೆಡೆಗಳ ರಕ್ತದಾನಿಗಳಾಗಿ ತುರ್ತು ಸಂದರ್ಭಗಳಲ್ಲಿ ರಕ್ತದಾನ ಮಾಡಿರುವ ದಿಶಾನ್ ಪೂಜಾರಿ, ಶ್ರೀನಿವಾಸ್ ಪ್ರಸಾದ್ ಮಯ್ಯ, ಶಾಂತರಾಮ್ ಮೊಗವೀರ, ಝಾಕೀರ್ ಹುಸೇನ್, ವಿನುತಾ ಕಿರಣ್, ಜಯರಾಜ್ ಸಾಲಿಯಾನ್, ನಿತ್ಯಾನಂದ್ ಅಮೀನ್, ಚೇತನ್ ಶಂಕರಪುರ ಹಾಗೂ ಅಬ್ದುಲ್ ಹಮೀದ್ ಉಚ್ಚಿಲ ಇವರನ್ನು ಮಲಬಾರ್ ಗೋಲ್ಡ್ ವತಿಯಿಂದ ಸ್ಮರಣಿಕೆಗಳೊಂದಿಗೆ ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ವಿನುತಾ ಕಿರಣ್, ಶ್ರೀನಿವಾಸ್ ಪ್ರಸಾದ್ ಮಯ್ಯ ಹಾಗೂ ಚೇತನ್ ಶಂಕರಪುರ ಇವರು ರಕ್ತದಾನದ ಅಗತ್ಯತೆ ಕುರಿತು ಮಾತನಾಡಿ, ಉಳಿದವರೂ ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯಸ್ಥ ಹಪೀಝ್ ರೆಹಮಾನ್, ಸಂಸ್ಥೆಯು ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಆದಾಯದ ಶೇ.5ರಷ್ಟನ್ನು ಸಮಾಜಮುಖಿ ಕಾರ್ಯಕ್ರಮಗಳಿಗೆ ವಿನಿಯೋಗಿಸುತ್ತಿದೆ. ಟ್ರಸ್ಟ್ ಆರಂಭವಾದಾಗಿನಿಂದ ದೇಶಾದ್ಯಂತ ಈವರೆಗೆ 282 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ಇಂಥ ಕಾರ್ಯಗಳಿಗೆ ವಿನಿಯೋಗಿಸಿದೆ. ಇವುಗಳಲ್ಲಿ ದೇಶದ 17 ರಾಜ್ಯಗಳ 95,000ಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ 60 ಕೋಟಿ ರೂ.ಗಳಿಗೂ ಅಧಿಕ ವಿದ್ಯಾರ್ಥಿ ವೇತನವನ್ನು ವಿತರಿಸಿದೆ ಎಂದರು.

ಮಲಬಾರ್ ಗೋಲ್ಡ್‌ನ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮುಸ್ತಾ, ಎ.ಕೆ.ಗುರುರಾಜ್, ಮಾರ್ಕೆಟಿಂಗ್ ವ್ಯವಸ್ಥಾಪಕ ತಂಝೀಮ್ ಶಿರ್ವ ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾರುಖ್ ಖಾನ್ ₹7500 ಕೋಟಿ ಒಡೆಯ: ವಿಶ್ವದ ಶ್ರೀಮಂತ ನಟರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ!

ಬಾಲಿವುಡ್‌ನ ಸೂಪರ್‌ಸ್ಟಾರ್ ಶಾರುಖ್ ಖಾನ್ ಕೇವಲ ನಟನೆಯಿಂದ ಮಾತ್ರವಲ್ಲದೆ ವ್ಯಾಪಾರದಲ್ಲಿನ ಯಶಸ್ಸಿನಿಂದಲೂ ಅಪಾರ ಸಂಪತ್ತು ಗಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಅಮಾನವೀಯ ಘಟನೆ: ‘ರಾಧೇ ರಾಧೇ’ ಎಂದ ನರ್ಸರಿ ಮಗುವಿಗೆ ಥಳಿಸಿ, ಬಾಯಿಗೆ ಟೇಪ್‌ ಅಂಟಿಸಿದ ಶಿಕ್ಷಕಿ ಬಂಧನ!

'ರಾಧೇ.. ರಾಧೇ..' ಎಂದು ಶುಭ ಕೋರಿದ ತಪ್ಪಿಗೆ ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿಗೆ ಶಿಕ್ಷಕಿಯೊಬ್ಬಳು ಥಳಿಸಿ, ಆಕೆಯ ಬಾಯಿಗೆ ಟೇಪ್ ಅಂಟಿಸಿದ ಅಮಾನವೀಯ ಘಟನೆ ಛತ್ತೀಸ್‌ಗಢದ ದುರ್ಗ್‌ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

ಎಸ್ಐಟಿ ತನಿಖೆ ಮುಗಿಯುವವರೆಗೆ ಧರ್ಮಸ್ಥಳ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ: ಗೃಹಸಚಿವ ಪರಮೇಶ್ವರ್

ಧರ್ಮಸ್ಥಳದಲ್ಲಿ ತಲೆಬುರುಡೆ ಪತ್ತೆ ಪ್ರಕರಣದ ಕುರಿತು ವಿಶೇಷ ತನಿಖಾ ದಳ (ಎಸ್ಐಟಿ) ವರದಿ ನೀಡುವವರೆಗೂ ನಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ನಟಿ ಖುಷ್ಬುಗೆ ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆ ಪಟ್ಟ: ಪಕ್ಷದ ನಡೆ ಹಿಂದಿನ ರಾಜಕೀಯ ಲೆಕ್ಕಾಚಾರವೇನು?

ಖ್ಯಾತ ನಟಿ ಹಾಗೂ ರಾಜಕಾರಣಿ ಖುಷ್ಬು ಸುಂದರ್ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ.