spot_img

ಉಡುಪಿ ಶಾರದಾ ಹೋಟೆಲ್ ಹಿಂಭಾಗದಲ್ಲಿ ಭೀಕರ ಬೆಂಕಿ!

Date:

spot_img
spot_img

ಉಡುಪಿ: ಉಡುಪಿಯ ಪ್ರಸಿದ್ಧ ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಹಿಂಭಾಗದ ಗಾರ್ಡನ್ ಏರಿಯಾದಲ್ಲಿ ನೆಡೆದ ಬೆಂಕಿ ಘಟನೆಯು ಸ್ಥಳೀಯರನ್ನು ದಿಗ್ಭ್ರಮೆಗೊಳಿಸಿದೆ. ಬೆಂಕಿಯು ಕೆಲವೇ ನಿಮಿಷಗಳಲ್ಲಿ ವ್ಯಾಪಕ ಪ್ರದೇಶವನ್ನು ಆವರಿಸಿತು. ಸ್ಥಳೀಯರು ತಮ್ಮಿಂದಾದಷ್ಟು ಪ್ರಯತ್ನಿಸಿದರೂ, ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ.

ಬೆಂಕಿಯ ಭೀಕರ ಸ್ಥಿತಿಯನ್ನು ನೋಡಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಘಟನಾಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ತುರ್ತಾಗಿ ತಲುಪಿ, ಬೆಂಕಿಯನ್ನು ನಿಯಂತ್ರಿಸಲು ಕಾರ್ಯಾಚರಣೆ ನಡೆಸಿದೆ. ಪ್ರಸ್ತುತ ಬೆಂಕಿಯನ್ನು ನಂದಿಸಲು ಪ್ರಯತ್ನಗಳು ಮುಂದುವರೆದಿವೆ.

ಈ ಘಟನೆಯಿಂದ ಹೋಟೆಲ್ ಹಿಂಭಾಗದಲ್ಲಿರುವ ಮನೆಗಳು, ಅಂಗಡಿಗಳು ಮತ್ತು ಮುಂಗಟ್ಟುಗಳ ವಾರಸುದಾರರಲ್ಲಿ ಆತಂಕ ವ್ಯಾಪಿಸಿದೆ. ಅನೇಕರು ತಮ್ಮ ಆಸ್ತಿ ಮತ್ತು ಸುರಕ್ಷಿತೆಯ ಬಗ್ಗೆ ಚಿಂತಿತರಾಗಿದ್ದಾರೆ. ಬೆಂಕಿ ಸಂಭವಿಸಲು ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಅಧಿಕಾರಿಗಳು ಘಟನೆಯ ಹಿನ್ನೆಲೆಯನ್ನು ತನಿಖೆ ಮಾಡುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಡ್‌ ಪಾಯ್ಸನಿಂಗ್ ಏಕೆ ಆಗುತ್ತದೆ? ಈ ಸಂದರ್ಭಗಳಲ್ಲಿ ಏನು ತಿನ್ನಬೇಕು, ಏನು ತಿನ್ನಬಾರದು?

ಫುಡ್‌ ಪಾಯ್ಸನಿಂಗ್‌ನಿಂದಾಗಿ ಆರೋಗ್ಯ ಹದಗೆಡುತ್ತದೆ, ಹೊಟ್ಟೆ ನೋವು, ಅತಿಸಾರ (ಲೂಸ್‌ಮೋಷನ್‌), ವಾಕರಿಕೆ ಮತ್ತು ವಾಂತಿಯಂತಹ ಸಮಸ್ಯೆಗಳು ಕಾಡುತ್ತವೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧ: ‘ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ತಪ್ಪೇನಿದೆ?’ – ತಮಿಳುನಾಡು ಮಾದರಿ ಪರಿಶೀಲಿಸಿ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಅದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದ್ದಾರೆ.

ನಿಟ್ಟೆಯಲ್ಲಿ ನಡೆದ ಕೇಶದಾನ

ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನಿಟ್ಟೆ ಕಾಲೇಜಿನಿಂದ 'ಕೇಶ ದಾನ' ಅಭಿಯಾನ ನಡೆಯಿತು.

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , ‘ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು’ ಎಂದು ಸ್ಪಷ್ಟನೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , 'ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು' ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.