ಬೈಲೂರು .ಫೆಬ್ರವರಿ. 24 : ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ತೀವ್ರವಾದ ಬೆಂಕಿ ಕಾಣಿಸಿಕೊಂಡಿದ್ದು ಸುತ್ತಮುತ್ತಲಿನ ಗುಡ್ಡಗಾಡುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗುತ್ತಿವೆ. ಸುತ್ತಮುತ್ತಲಿನ ಮನೆ ಹಾಗೂ ಸ್ಥಳೀಯರಲ್ಲಿ ಆತಂಕದ ವಾತಾವರಣ ಉಂಟಾಗಿದ್ದು ಈಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಕಳೆದ ಐದು ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಆಗಮಿಸಿದ್ದ ಉತ್ತರ ಕನ್ನಡದ ಕಾರವಾರ ಮೂಲದ ಪಿಎಸ್ಐ ಖೀರಪ್ಪ ಗಟಕಾಂಬೆ (55) ಅವರು ಬಂಟ್ವಾಳ ಪೇಟೆಯಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಧರ್ಮಸ್ಥಳ ಗ್ರಾಮದ ಸುತ್ತಮುತ್ತಲ ಅನುಮಾನಾಸ್ಪದ ಸಾವುಗಳ ಕುರಿತು ಎಸ್ಐಟಿ ರಚನೆಯಾಗಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.