spot_img

ಉಡುಪಿಯಲ್ಲಿ ರಕ್ಷಣೆಗೊಳಗಾದ ಹೊರ ರಾಜ್ಯದ ಮಾನಸಿಕ ಅಸ್ವಸ್ಥ ಮಹಿಳೆ ಕುಟುಂಬಕ್ಕೆ ಹಸ್ತಾಂತರ

Date:

spot_img
spot_img

ಉಡುಪಿ : ಭಾರಿ ಮಳೆಯ ನಡುವೆ ಉಡುಪಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲೆದಾಡುತ್ತಿದ್ದ ಹೊರರಾಜ್ಯದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ವಿಶುಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ, ಚಿಕಿತ್ಸೆ ಕೊಡಿಸಿ ರಾಜ್ಯ ಮಹಿಳಾ ನಿಲಯಕ್ಕೆ ದಾಖಲಿಸಿದ್ದರು. ಇದೀಗ ಆ ಮಹಿಳೆಯ ಸಂಬಂಧಿಕರು ಪತ್ತೆಯಾಗಿದ್ದು, ಅವರನ್ನು ಸುರಕ್ಷಿತವಾಗಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

ರಕ್ಷಣೆಗೊಳಗಾದ ಮಹಿಳೆಯನ್ನು 40 ವರ್ಷ ವಯಸ್ಸಿನ ವೈಶಾಲಿ ಎಂದು ಗುರುತಿಸಲಾಗಿದೆ. ರಾತ್ರಿಯಿಂದ ಬೆಳಗಿನ ಜಾವದವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೊಂದಲಮಯವಾಗಿ ಅಡ್ಡಾಡುತ್ತಿದ್ದ ವೈಶಾಲಿಯನ್ನು ರಕ್ಷಿಸಲು ವಿಶುಶೆಟ್ಟಿ ಅವರು ನಗರ ಠಾಣಾ ಪೊಲೀಸರ ಸಹಾಯದಿಂದ ಸಾಕಷ್ಟು ಶ್ರಮಿಸಬೇಕಾಯಿತು.

ರಕ್ಷಣೆಯ ಬಳಿಕ, ವೈಶಾಲಿಯನ್ನು ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಲಾಯಿತು. ಚಿಕಿತ್ಸೆಯ ನಂತರ ಮಹಿಳೆ ಶಾಂತವಾಗಿ ಸುಧಾರಣೆ ಕಾಣಲಾರಂಭಿಸಿದರು. ಸಂಬಂಧಿಕರು ಪತ್ತೆಯಾಗದ ಕಾರಣ, ವಿಶುಶೆಟ್ಟಿ ಅವರು ಚಿಕಿತ್ಸೆಯ ಬಳಿಕ ಅವರನ್ನು ರಾಜ್ಯ ಮಹಿಳಾ ನಿಲಯಕ್ಕೆ ದಾಖಲಿಸಿದ್ದರು. ನಿಲಯದ ಮುಖ್ಯಾಧಿಕಾರಿ ಶ್ರೀಮತಿ ಪುಷ್ಪರಾಣಿಯವರು ಮಹಿಳೆಯ ವಿಶ್ವಾಸ ಗಳಿಸಿ, ಆಕೆ ನೀಡಿದ ಮಾಹಿತಿಯ ಆಧಾರದ ಮೇಲೆ ಸಂಬಂಧಿಕರನ್ನು ಸಂಪರ್ಕಿಸುವಲ್ಲಿ ಯಶಸ್ವಿಯಾದರು. ಔರಂಗಾಬಾದ್ ಮೂಲದ ವೈಶಾಲಿ, ಮನೋರೋಗದಿಂದ ಬಳಲಿ ಉಡುಪಿಗೆ ಬಂದಿದ್ದರು ಮತ್ತು ಅವರ ಕಾಣೆಯಾದ ಬಗ್ಗೆ ಔರಂಗಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.

“ಬೇರೆ ಬೇರೆ ಕಾರಣಗಳಿಂದ ಮನೋರೋಗಿಗಳಾಗಿ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಜನರು ಬರುತ್ತಾರೆ. ಯಾರನ್ನೂ ನಿರ್ಲಕ್ಷಿಸಬಾರದು. ಸಾಧ್ಯವಾದರೆ ರಕ್ಷಿಸುವ ಕೆಲಸ ಮಾಡಿದರೆ ಎಷ್ಟೋ ಜನ ತಮ್ಮ ಕುಟುಂಬವನ್ನು ಸೇರಿರುವ ಉದಾಹರಣೆಗಳು ಬಹಳಷ್ಟಿವೆ. ಈ ಪ್ರಕರಣದಲ್ಲೂ ಕೂಡ ಮಹಿಳೆಯನ್ನು ಬಹಳ ಹರಸಾಹಸಪಟ್ಟು ರಕ್ಷಣೆ ಮಾಡಿದ್ದು, ಚಿಕಿತ್ಸೆ ಕೊಡಿಸಿದ ಬಳಿಕ ರಾಜ್ಯ ಮಹಿಳಾ ನಿಲಯದಿಂದ ಹಸ್ತಾಂತರವಾಗಿರುವುದು ಒಂದು ಉದಾಹರಣೆ. ಮಹಿಳೆಯನ್ನು ಹಸ್ತಾಂತರಿಸುವಲ್ಲಿ ಯಶಸ್ವಿಯಾದ ರಾಜ್ಯ ಮಹಿಳಾ ನಿಲಯದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಧನ್ಯವಾದಗಳು,” ಎಂದು ವಿಶುಶೆಟ್ಟಿ ಅಂಬಲಪಾಡಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.