spot_img

ನಡುರಾತ್ರಿ ಕತ್ತಿಯಿಂದ ದಾಳಿ: ಮಲಗಿದ್ದ ತಂದೆಗೆ ಹಲ್ಲೆ – ಮಗಳ ಬೊಬ್ಬೆಯಿಂದ ತಪ್ಪಿದ ಪ್ರಾಣಾಪಾಯ

Date:

ಉಡುಪಿ : ಉಡುಪಿ ಜಿಲ್ಲೆಯಲ್ಲಿ ನಡುರಾತ್ರಿ ನಡೆದ ಭೀಕರ ಘಟನೆಯಲ್ಲಿ ಮಲಗಿದ್ದ ಕೂಲಿ ಕಾರ್ಮಿಕನೊಬ್ಬನ ಮೇಲೆ ಕತ್ತಿಯಿಂದ ದುಷ್ಕರ್ಮಿಯೊಬ್ಬ ದಾಳಿ ನಡೆಸಿದ ಪ್ರಕರಣ ವರದಿಯಾಗಿದೆ. ಆದರೆ ಮಗಳ ಸಮಯೋಚಿತ ಎಚ್ಚರಿಕೆಯಿಂದ ದೊಡ್ಡ ಅನಾಹುತ ತಪ್ಪಿದ್ದು, ಗಾಯಗೊಂಡ ತಂದೆಯನ್ನು ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ.

ಘಟನೆ ಆದಿ ಉಡುಪಿಯಲ್ಲಿರುವ ನಿವಾಸವೊಂದರಲ್ಲಿ ಶನಿವಾರ ರಾತ್ರಿ ನಡೆದಿದೆ. ಕರಬಸಪ್ಪ (43) ಎಂಬ ಕೂಲಿ ಕಾರ್ಮಿಕ ಮಗಳೊಂದಿಗೆ ಮನೆಯೊಳಗೆ ಮಲಗಿದ್ದ ವೇಳೆ, ಸ್ಥಳೀಯ ನಿವಾಸಿ ಕುಮಾರ್ ಎಂಬಾತ ಕತ್ತಿ ಹಿಡಿದು ಮನೆಯೊಳಗೆ ನುಗ್ಗಿ, ಮಲಗಿದ್ದ ಕರಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಮಗಳು ಬೊಬ್ಬೆ ಹಾಕಿದ ಶಬ್ದ ಕೇಳಿ ಸ್ಥಳೀಯರು ಧಾವಿಸಿದ್ದಾರೆ.

ಗಂಭೀರ ಗಾಯಗೊಂಡ ಕರಬಸಪ್ಪರವರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ತಕ್ಷಣ ಸ್ಥಳಕ್ಕೆ ಧಾವಿಸಿ ತಮ್ಮ ವಾಹನದಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಲು ನೆರವಾಗಿದ್ದಾರೆ. ಬಳಿಕ ವೈದ್ಯರ ಸಲಹೆಯಂತೆ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿ ಕುಮಾರ್‌ನನ್ನು ಬಂಧಿಸಿ, ಹಲ್ಲೆಗೆ ಬಳಸಿದ್ದ ಕತ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸೈಬರ್ ಕಿರುಕುಳ ವಿರೋಧ ದಿನ

ಈ ದಿನವನ್ನು 2012ರಲ್ಲಿ ಬ್ರಿಟನ್‌ನ The Cybersmile Foundation ಪ್ರಾರಂಭಿಸಿದ್ದು, ಇತ್ತೀಚಿನ ದಶಕದಲ್ಲಿ ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿರುವಾಗ ಆನ್‌ಲೈನ್ ಕಿರುಕುಳದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶವಿದೆ.

ಉಡುಪಿ ಜಿಲ್ಲೆಯಲ್ಲಿ ನಾಳೆ (ಜೂನ್ 17) ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ (Red Alert) ಜಾರಿ ಮಾಡಿದೆ

ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

ಅರುಣಾಚಲ್‌ನ ಸೇನಾ ಯೋಧ ಮತ್ತು SSLC ಯಲ್ಲಿ ಪರ್ಫೆಕ್ಟ್‌ 625/625! ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

ದೇಹದ ಪ್ರತಿಯೊಂದು ಅಂಗ ಶುದ್ಧಗೊಳಿಸುವ ಆಹಾರ ಪದಾರ್ಥಗಳು

ನಿತ್ಯ ಆಹಾರದಲ್ಲಿ ಕೆಲವೊಂದು ಖಾದ್ಯಗಳನ್ನು ಸೇರಿಸಿಕೊಂಡರೆ, ದೇಹವನ್ನು ಒಳಗಿನಿಂದ ಶುದ್ಧಗೊಳಿಸಬಹುದಾಗಿದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಿದ್ದಾರೆ.