ನಡುರಾತ್ರಿ ಕತ್ತಿಯಿಂದ ದಾಳಿ: ಮಲಗಿದ್ದ ತಂದೆಗೆ ಹಲ್ಲೆ – ಮಗಳ ಬೊಬ್ಬೆಯಿಂದ ತಪ್ಪಿದ ಪ್ರಾಣಾಪಾಯ

Date:

spot_img

ಉಡುಪಿ : ಉಡುಪಿ ಜಿಲ್ಲೆಯಲ್ಲಿ ನಡುರಾತ್ರಿ ನಡೆದ ಭೀಕರ ಘಟನೆಯಲ್ಲಿ ಮಲಗಿದ್ದ ಕೂಲಿ ಕಾರ್ಮಿಕನೊಬ್ಬನ ಮೇಲೆ ಕತ್ತಿಯಿಂದ ದುಷ್ಕರ್ಮಿಯೊಬ್ಬ ದಾಳಿ ನಡೆಸಿದ ಪ್ರಕರಣ ವರದಿಯಾಗಿದೆ. ಆದರೆ ಮಗಳ ಸಮಯೋಚಿತ ಎಚ್ಚರಿಕೆಯಿಂದ ದೊಡ್ಡ ಅನಾಹುತ ತಪ್ಪಿದ್ದು, ಗಾಯಗೊಂಡ ತಂದೆಯನ್ನು ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ.

ಘಟನೆ ಆದಿ ಉಡುಪಿಯಲ್ಲಿರುವ ನಿವಾಸವೊಂದರಲ್ಲಿ ಶನಿವಾರ ರಾತ್ರಿ ನಡೆದಿದೆ. ಕರಬಸಪ್ಪ (43) ಎಂಬ ಕೂಲಿ ಕಾರ್ಮಿಕ ಮಗಳೊಂದಿಗೆ ಮನೆಯೊಳಗೆ ಮಲಗಿದ್ದ ವೇಳೆ, ಸ್ಥಳೀಯ ನಿವಾಸಿ ಕುಮಾರ್ ಎಂಬಾತ ಕತ್ತಿ ಹಿಡಿದು ಮನೆಯೊಳಗೆ ನುಗ್ಗಿ, ಮಲಗಿದ್ದ ಕರಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಮಗಳು ಬೊಬ್ಬೆ ಹಾಕಿದ ಶಬ್ದ ಕೇಳಿ ಸ್ಥಳೀಯರು ಧಾವಿಸಿದ್ದಾರೆ.

ಗಂಭೀರ ಗಾಯಗೊಂಡ ಕರಬಸಪ್ಪರವರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ತಕ್ಷಣ ಸ್ಥಳಕ್ಕೆ ಧಾವಿಸಿ ತಮ್ಮ ವಾಹನದಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಲು ನೆರವಾಗಿದ್ದಾರೆ. ಬಳಿಕ ವೈದ್ಯರ ಸಲಹೆಯಂತೆ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿ ಕುಮಾರ್‌ನನ್ನು ಬಂಧಿಸಿ, ಹಲ್ಲೆಗೆ ಬಳಸಿದ್ದ ಕತ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.