spot_img

ತಿಂಗಳು ತಿಂಗಳು ಹಾಕಕ್ಕೆ ಅದೇನು ಸಂಬಳನಾ?– ಸಚಿವ ಕೆ.ಜೆ. ಜಾರ್ಜ್ ವಿವಾದಾತ್ಮಕ ಹೇಳಿಕೆ!

Date:

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿದ್ದ ಪಂಚ ಗ್ಯಾರೆಂಟಿಗಳ ಪೈಕಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆ ನೂರಾರು ಮಹಿಳೆಯರಿಗೆ ಮೂರು ತಿಂಗಳಿನಿಂದ ಹಣವಿಲ್ಲದೆ ನಿರೀಕ್ಷೆಯಲ್ಲಿ ಇರಿಸಿದೆ. ಈ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿನ ಮನೆಯ ಯಜಮಾನಿಯರಿಗೆ ತಿಂಗಳಿಗೆ ₹2,000 ಜಮೆ ಮಾಡಲಾಗುವುದು ಎಂದು ಘೋಷಿಸಲಾಗಿತ್ತು. ಆದರೆ, ಕಳೆದ ಕೆಲವು ತಿಂಗಳಿಂದ ಹಣ ಜಮೆಯಾಗದೇ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯೋಜನೆ ಹಣ ತಡ – ಮಹಿಳೆಯರ ಆಕ್ರೋಶ

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಹಣ , ಪ್ರತೀ ತಿಂಗಳು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಇದ್ದ ಮಹಿಳೆಯರು ಈಗ ಸರ್ಕಾರದ ನಿರ್ಲಕ್ಷ್ಯಕ್ಕೆ ಕಿಡಿಕಾರುತ್ತಿದ್ದಾರೆ. ಇದಕ್ಕೆ ಬಿಜೆಪಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಜನತೆಗೂ ಹಣಕ್ಕೂ ಮಧ್ಯೆ ರಾಜಕೀಯ ಆಟ ಆಡುತ್ತಿದೆ ಎಂಬ ಆರೋಪ ಹೊರಿಸಿದೆ.

ಸಚಿವ ಕೆ.ಜೆ. ಜಾರ್ಜ್ ವಿವಾದಾತ್ಮಕ ಹೇಳಿಕೆ

ಈ ಬಗ್ಗೆ ಮಾಧ್ಯಮಗಳು “ಗೃಹಲಕ್ಷ್ಮಿ ಹಣ ಮೂರು ತಿಂಗಳಿನಿಂದ ಬಂದಿಲ್ಲವೇಕೆ?” ಎಂದು ಸಚಿವ ಕೆ.ಜೆ. ಜಾರ್ಜ್ ಅವರನ್ನು ಪ್ರಶ್ನಿಸಿದಾಗ, “ತಿಂಗಳು ತಿಂಗಳು ಹಾಕಕ್ಕೆ ಅದೇನು ಸಂಬಳನಾ? ಹಾಕ್ತಾರೆ ಬಿಡಿ!” ಎಂದು ನಿರ್ಲಕ್ಷ್ಯ ಭರಿತವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವರ ಈ ಹೇಳಿಕೆ ಇದೀಗ ರಾಜ್ಯದಲ್ಲಿ ವಿವಾದಕ್ಕೆ ಕಾರಣ ಆಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಮೊದಲು ಘೋಷಣೆ ಮಾಡಿ, ಅಧಿಕಾರಕ್ಕೆ ಬಂದ ಮೇಲೆ ನಿರ್ಲಕ್ಷ್ಯ ತೋರುವ ಸರ್ಕಾರ ಜನರ ಪ್ರಶ್ನೆಗಳಿಗೆ ಗಂಭೀರವಾಗಿ ಉತ್ತರ ನೀಡಬೇಕೇ ಹೊರತು ತಿರಸ್ಕಾರಯುಕ್ತವಾಗಿ ಅಲ್ಲ ಎಂಬ ಬೇಸರ ಜನರಲ್ಲಿ ವ್ಯಕ್ತವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.