spot_img

ಮಾರ್ಚ್ 15 ರಂದು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

Date:

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15ರ ಬೆಳಿಗ್ಗೆ ಗಂಟೆ 9.30ಕ್ಕೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಾಗೂ ಬೆಳಿಗ್ಗೆ ಗಂಟೆ 11.00ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೇಟಿ ನೀಡಲಿದ್ದಾರೆ. ಸಂಜೆ ಗಂಟೆ 4.45ಕ್ಕೆ ಬಿಜೆಪಿ ಹಿರಿಯ ನಾಯಕ ದಿ! ಸೋಮಶೇಖರ್ ಭಟ್ ಅವರ ನಿವಾಸಕ್ಕೆ ಬೇಟಿ ನೀಡಿ, ಸಂಜೆ ಗಂಟೆ 6.30ಕ್ಕೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಮಿಯ್ಯಾರು ಲವ-ಕುಶ ಬಯಲು ಕಂಬಳವನ್ನು ವೀಕ್ಷಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

18 ಶಾಸಕರ ಅಮಾನತು ಹಿಂಪಡೆಯಲು ಬಿಜೆಪಿ ಮನವಿ: ಸ್ಪೀಕರ್ ಖಾದರ್ ಧನಾತ್ಮಕ ಸ್ಪಂದನೆ

ಬಜೆಟ್ ಅಧಿವೇಶನದ ಕೊನೆಯ ದಿನ ಅಮಾನತುಗೊಳಗಾದ 18 ಶಾಸಕರ ವಿರುದ್ಧದ ಆದೇಶ ಹಿಂಪಡೆಯುವಂತೆ ಆಗ್ರಹಿಸಿ, ಬಿಜೆಪಿ ನಿಯೋಗ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಜಾತಿಗಣತಿ ವರದಿ ಬಗ್ಗೆ ನಂಬಿಕೆ ಇಲ್ಲದಿದ್ದರೆ ಜಯಪ್ರಕಾಶ ಹೆಗ್ಡೆ ಬಳಿ ಕೇಳಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

“ಜಾತಿಗಣತಿ ವರದಿ ಸಿದ್ದರಾಮಯ್ಯ ಮನೆಯಲ್ಲಿ ಇದೆ” ಎನ್ನುವ ಆರ್. ಅಶೋಕ್ ಆರೋಪಕ್ಕೆ ಡಿಕೆಶಿ ತಿರುಗೇಟಾಗಿ ಜಯಪ್ರಕಾಶ ಹೆಗ್ಡೆಯವರ ಬಳಿ ಕೇಳಬಹುದು ಎಂದರು.

ಚಿನ್ನದ ದರ ಇತಿಹಾಸದ ಗರಿಷ್ಠ ಮಟ್ಟಕ್ಕೆ: ದೆಹಲಿಯಲ್ಲಿ 10 ಗ್ರಾಂ ಚಿನ್ನ ₹99,800, ಬೆಳ್ಳಿಯೂ ಏರಿಕೆ

ದೇಶದ ಚಿನ್ನ ಮಾರುಕಟ್ಟೆಯಲ್ಲಿ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸೋಮವಾರ ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಮುಂಬೈದಿಂದ ಮಂಗಳೂರಿಗೆ ಸಾಗುತ್ತಿದ್ದ ಐರಾವತ ಬಸ್ಸಿನ ಸೀಟಿನಲ್ಲೇ ಪ್ರಾಣಬಿಟ್ಟ ಪ್ರಯಾಣಿಕ

ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ KSRTC ಐರಾವತ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಏಪ್ರಿಲ್ 21 ರಂದು ಮುಂಜಾನೆ ಉಡುಪಿಯಲ್ಲಿ ನಡೆದಿದೆ.