
ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕರು ಮಾಜಿ ಸಚಿವರೂ ಆಗಿರುವ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಇತ್ತೀಚೆಗೆ ಈ ಇಬ್ಬರು ಶಾಸಕರು ಕಾಂಗ್ರೆಸ್ ನಾಯಕರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಹಾಗೂ ಪಕ್ಷದ ವಿರುದ್ಧ ಪ್ರತ್ಯಕ್ಷವಾಗಿ ಮಾತಾಡಿದ್ದರು. ಇದರಿಂದ ಕೋಪಗೊಂಡ ಬಿಜೆಪಿಯ ಹಿರಿಯ ನಾಯಕರು ಈ ಇಬ್ಬರನ್ನು ಉಚ್ಚಾಟಿಸಲು ಶಿಫಾರಸು ಮಾಡಿದ್ದು, ಇದೀಗ ಅಧಿಕೃತವಾಗಿ ಈ ಆದೇಶ ಹೊರಬಿದ್ದಿದೆ.
ಎರಡು ತಿಂಗಳ ಹಿಂದೆ ಪಕ್ಷದ ಶಿಸ್ತು ಉಲ್ಲಂಘನೆಯ ಆರೋಪದ ಮೇಲೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ, ನೋಟಿಸ್ಗೆ ಸೂಕ್ತ ಸ್ಪಷ್ಟನೆ ನೀಡದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.