spot_img

ಪ್ರಾಕೃತಿಕ ವಿಕೋಪ ಪರಿಹಾರ ಬಿಡುಗಡೆಗೆ ಶಾಸಕ ವಿ. ಸುನಿಲ್ ಕುಮಾರ್ ಸಿ.ಎಂ ಗೆ ಪತ್ರ

Date:

spot_img
sunil kumar11

ಬೆಂಗಳೂರು: 2024-25 ಹಾಗೂ 2025-26 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ಸೇರಿದಂತೆ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತೀ ಹೆಚ್ಚು ಮಳೆಯಾಗಿದ್ದು, ಪರಿಣಾಮ ನೆರೆ–ಪ್ರವಾಹದಿಂದಾಗಿ ಹಲವಾರು ರಸ್ತೆ, ಸೇತುವೆಗಳು ಹಾಗೂ ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ.

2024-25ನೇ ಸಾಲಿನಲ್ಲಿ ಸಲ್ಲಿಸಲಾದ ಪ್ರಸ್ತಾವನೆಯ ಅಂದಾಜು ನಷ್ಟದ ಮೊತ್ತ ಲೋಕೋಪಯೋಗಿ ಇಲಾಖೆ 2723.00 ಲಕ್ಷ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 2254.00 ಲಕ್ಷ, ನಗರಾಭಿವೃದ್ಧಿ ಇಲಾಖೆ 500.00 ಲಕ್ಷ ಹಾಗಾಗಿ ಒಟ್ಟು ಅಂದಾಜು ನಷ್ಟದ ಮೊತ್ತ 5477.00 ಲಕ್ಷ ರೂಪಾಯಿ ಆಗಿರುತ್ತದೆ. ಆದರೆ ಬಿಡುಗಡೆಯಾದ ಅನುದಾನ ಲೊಕೋಪಯೋಗಿ ಇಲಾಖೆ 140.00, ಗ್ರಾಮೀಣಾಭಿವೃದ್ದಿ ಇಲಾಖೆ 120.00 ಲಕ್ಷ, ನಗರಾಭಿವೃದ್ದಿ ಇಲಾಖೆ 16.75. ಲಕ್ಷ ಬಿಡುಗಡೆಯಾಗಿದ್ದು ಒಟ್ಟಾರೆ 276.75 ಲಕ್ಷ ರೂಪಾಯಿ ಅನುದಾನ ಮಾತ್ರ ಬಿಡುಗಡೆ ಆಗಿರುತ್ತದೆ. ಪ್ರಸಕ್ತ 2025-26 ಸಾಲಿನಲ್ಲಿ ಜುಲೈ 20ರವರೆಗೆ ಪ್ರಸ್ತಾವನೆ ಸಲ್ಲಿಸಿದ ಅಂದಾಜು ನಷ್ಟದ ಮೊತ್ತ ಲೋಕೋಪಯೋಗಿ ಇಲಾಖೆ 1623.00 ಲಕ್ಷ ರೂಪಾಯಿ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ 3797.00 ಲಕ್ಷ ರೂಪಾಯಿ ನಗರಾಭಿವೃದ್ಧಿ ಇಲಾಖೆ 2500.00 ಲಕ್ಷ ರೂಪಾಯಿ. ಒಟ್ಟು 7970.00 ಲಕ್ಷ ರೂಪಾಯಿ ಹಾನಿ ಆಗಿರುವುದಾಗಿ ಇಲಾಖೆಗಳಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.

2025-26 ಸಾಲಿನಲ್ಲಿ ಪ್ರತಿ ಇಲಾಖೆಗೆ ಬಿಡುಗಡೆಯಾದ ಅನುದಾನ ಶೂನ್ಯವಾಗಿದೆ ಎಂದು ಪತ್ರದಲ್ಲಿ ಅವರು ಮನವರಿಕೆ ಮಾಡಿದ್ದಾರೆ. ಇನ್ನಷ್ಟು ಮಳೆ ಆಗುವ ಸಂಭವ ಇದ್ದು, ಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈವರೆಗೆ ಪ್ರಸ್ತಾವನೆ ಸಲ್ಲಿಸಿದರೂ, 2025-26 ನೇ ಸಾಲಿಗೆ ಯಾವುದೇ ಅನುದಾನ ಬಿಡುಗಡೆ ಆಗಿರುವುದಿಲ್ಲ, ಇದರಿಂದಾಗಿ ರಸ್ತೆಗಳ ನಿರ್ವಹಣೆಯಲ್ಲಿ ಗಂಭೀರ ಅಡಚಣೆ ಎದುರಾಗಿದೆ ಎಂದವರು ತಿಳಿಸಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಸುಮಾರು 134.47 ಕೋಟಿಗೂ ಅಧಿಕ ಮೊತ್ತದ ಹಾನಿಯಾಗಿದ್ದು, ಹಾನಿಯಾದ ರಸ್ತೆಗಳು ಹಾಗೂ ಕಟ್ಟಡಗಳ ನಿರ್ವಹಣೆಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಸಾದ್ ಯೋಜನೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಸೇರಿಸಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಸದ ರಾಘವೇಂದ್ರ ಮನವಿ

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳು ಮತ್ತು ಮಾಧ್ಯಮದವರ ಮೇಲೆ ಹಲ್ಲೆ,ಲಘು ಲಾಠಿ ಪ್ರಹಾರ; ಎಸ್ಪಿ ಅರುಣ್ ಕುಮಾರ್ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ಅನಾಮಿಕ ದೂರಿನ ಮೇರೆಗೆ ಶವಗಳ ಶೋಧ ನಡೆಸುತ್ತಿದ್ದ ಎಸ್ಐಟಿ ತಂಡ ಕಾರ್ಯಾಚರಣೆ ಮುಗಿಸಿ ಹಿಂದಿರುಗಿದ ಬಳಿಕ, ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.

ಶಿವಮೊಗ್ಗ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಎರ್ಲಪಾಡಿ ಶಾಲೆಯ ಪ್ರಥ್ವಿಗೆ ಚಿನ್ನದ ಪದಕ!

ಶಿವಮೊಗ್ಗದ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ಆಗಸ್ಟ್ 3ರಂದು ನಡೆದ 3ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಎರ್ಲಪಾಡಿ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಪ್ರಥ್ವಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ಬಂಟರ ಸೇವಾ ಸಂಘ (ರಿ) ಕುಕ್ಕುಂದೂರು ಗ್ರಾಮ ಕಾರ್ಕಳ ತಾಲೂಕು ಇವರ ನೇತೃತ್ವದಲ್ಲಿ ದಿನಾಂಕ 08.08.2025 ರಂದು ನಡೆಯಲಿರುವ 10 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ

ಬಂಟರ ಸೇವಾ ಸಂಘ (ರಿ), ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ 10ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ದಿನಾಂಕ 08-08-2025 ಶುಕ್ರವಾರದಂದು ಶ್ರೀ ದೇವಿ ಕೃಪಾ ಸಭಾಭವನದಲ್ಲಿ ವೈಭವದಿಂದ ನಡೆಯಲಿದೆ.