spot_img

ಗಂಗಾ ಶುದ್ಧೀಕರಣದ ಭರವಸೆ ಮರೆತ ಮೋದಿ ಸರಕಾರ! – ಖರ್ಗೆಯ ಟೀಕೆ

Date:

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಅವರು ಗುರುವಾರ ಎಕ್ಸ್‌ ಪೋಸ್ಟ್ ಮಾಡುತ್ತಾ, “ಮೋದಿ ಜಿ ಗಂಗಾ ಮಾತೆ ಎಂದು ಕರೆದರು, ಆದರೆ ಗಂಗಾ ಶುದ್ಧೀಕರಣದ ಭರವಸೆಯನ್ನು ಮರೆತಿದ್ದಾರೆ!” ಎಂದು ವಾಗ್ದಾಳಿ ನಡೆಸಿದರು.

2014ರಲ್ಲಿ ಆರಂಭವಾದ ನಮಾಮಿ ಗಂಗೆ ಯೋಜನೆ ಅಡಿಯಲ್ಲಿ 2026ರೊಳಗೆ 42,500 ಕೋಟಿ ರೂ. ವೆಚ್ಚ ಮಾಡಬೇಕಾಗಿತ್ತು. ಆದರೆ 2024 ಡಿಸೆಂಬರ್ ವರೆಗೆ ಕೇವಲ 19,271 ಕೋಟಿ ರೂ. ಮಾತ್ರ ಖರ್ಚಾಗಿದ್ದು, ಶೇಕಡಾ 55% ನಿಧಿ ಇನ್ನೂ ಬಳಕೆಯಾಗಿಲ್ಲ ಎಂದು ಸಂಸತ್ತಿನಲ್ಲಿ ಮಾಹಿತಿ ನೀಡಲಾಗಿದೆ. ಇದನ್ನು ಉಲ್ಲೇಖಿಸಿದ ಖರ್ಗೆ, “ಮಾ ಗಂಗೆಯ ಬಗ್ಗೆ ಇಷ್ಟೊಂದು ಅಸಡ್ಡೆ ಏಕೆ?” ಎಂದು ಪ್ರಧಾನಿ ನರೇಂದ್ರ ಮೋದಿಯನ್ನೇ ಪ್ರಶ್ನಿಸಿದ್ದಾರೆ.

ಇದೇ ವೇಳೆ, ಪ್ರಧಾನಿ ಮೋದಿ ಗುರುವಾರ ಬೆಳಗ್ಗೆ ಉತ್ತರಾಖಂಡದ ಉತ್ತರಕಾಶಿಯ ಮುಖ್ಯಾ ದೇವಸ್ಥಾನದಲ್ಲಿ ಗಂಗಾ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಗಂಗೋತ್ರಿ ಧಾಮದಿಂದ ಚಳಿಗಾಲದ ವೇಳೆಗೆ ವಿಗ್ರಹವನ್ನು ಸ್ಥಳಾಂತರಿಸುವ ಮುಖ್ಯಾ ಗಂಗಾ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ, “ಗಂಗಾ ಮಾತೆ ನನ್ನನ್ನು ದತ್ತು ತೆಗೆದುಕೊಂಡಿದ್ದಾಳೆ. ಆ ಆಶೀರ್ವಾದವೇ ನನ್ನನ್ನು ಕಾಶಿಗೆ ಕರೆದೊಯ್ದು ಜನರ ಸೇವೆ ಮಾಡಲು ಅವಕಾಶ ನೀಡಿತು” ಎಂದು ಭಾವುಕರಾಗಿ ಪ್ರತಿಕ್ರಿಯಿಸಿದರು.

ಮೋದಿಯ ಈ ಹೇಳಿಕೆ ಮತ್ತು ಖರ್ಗೆಯ ಟೀಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಲವಿದ್ಯುತ್ ಉತ್ಪಾದನೆಯನ್ನು ಬಿಟ್ಟು ದುಬಾರಿ ವಿದ್ಯುತ್ ಖರೀದಿಯಿಂದ ರಾಜ್ಯಕ್ಕೆ ₹600 ಕೋಟಿಯಷ್ಟು ನಷ್ಟ!

ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿರುವಾಗಲೂ, ಇಂಧನ ಇಲಾಖೆ ಜಲವಿದ್ಯುತ್ ಉತ್ಪಾದನೆಯ ಲಾಭವನ್ನು ಬಳಸದೆ ಹೊರ ರಾಜ್ಯಗಳಿಂದ ದುಬಾರಿ ವಿದ್ಯುತ್ ಖರೀದಿಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ₹550 ರಿಂದ ₹600 ಕೋಟಿ ವರೆಗಿನ ನಷ್ಟ ಉಂಟಾಗಿದೆ ಎಂಬ ಅಂಕಿ ಅಂಶ ಇದೀಗ ಬಹಿರಂಗವಾಗಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ: ಮಂಗಳೂರು ಉರ್ವ ಠಾಣೆಯಲ್ಲಿ ಎಫ್‌ಐಆರ್!

ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪುನೀತ್ ಕೆರೆಹಳ್ಳಿಯವರ ವಿರುದ್ಧ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಿಯುತ ಬಕ್ರೀದ್‌ಗೆ ಮುನ್ನೆಚ್ಚರಿಕೆ ಕ್ರಮ: ಅನಧಿಕೃತ ಜಾನುವಾರು ವಧೆ ಹಾಗೂ ಸಾಗಾಣಿಕೆಗೆ ಕಡಿವಾಣ – ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಬರುವ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಜಾನುವಾರುಗಳ ಅನಧಿಕೃತ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಐಪಿಎಲ್ ಗೆಲುವಿಗೆ ದೇವರ ಆಶೀರ್ವಾದ? ವಿರಾಟ್-ಅನುಷ್ಕಾ ಭಕ್ತಿಯ ಹಿನ್ನಲೆ ಇದೀಗ ಚರ್ಚೆಗೆ ಕಾರಣ

ಐಪಿಎಲ್ ಟ್ರೋಫಿ ಗೆದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಭಾವುಕರಾದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಜೋಡಿ ಪಂದ್ಯಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದ ವಿಚಾರವೂ ಇದೀಗ ಮತ್ತೆ ಬೆಳಕಿಗೆ ಬಂದಿದೆ.