
ನಾಗಪುರ: ನರೇಂದ್ರ ಮೋದಿ ಅವರು ಪ್ರಧಾನಿ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲು ಮಾರ್ಚ್ 30ರಂದು ಆರ್ಎಸ್ಎಸ್ನ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಲಿದ್ದು, ಆರ್ಎಸ್ಎಸ್ ಸಂಸ್ಥಾಪಕ ಕೇಶವ್ ಬಲಿರಾಂ ಹೆಡ್ಗೇವಾರ್ ಮತ್ತು ಎರಡನೇ ಸರಸಂಘಚಾಲಕ ಎಂ.ಎಸ್. ಗೋಲ್ವಾಲ್ಕರ್ ಸ್ಮಾರಕದಲ್ಲಿ ನಮನ ಸಲ್ಲಿಸಲಿದ್ದಾರೆ. ಇದೇ ದಿನ ಸಂಘದ ಪ್ರತಿಪದ ದಿನ ಮತ್ತು ಹಿಂದೂಗಳ ಯುಗಾದಿ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಅಂಬೇಡ್ಕರ್ ದೀಕ್ಷಾಭೂಮಿಗೆ ಭೇಟಿ
ನಂತರ, ಪ್ರಧಾನಿ ಮೋದಿ 1956ರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ ದೀಕ್ಷಾಭೂಮಿಗೆ ಭೇಟಿ ನೀಡಲಿದ್ದು, ಅಂಬೇಡ್ಕರ್ಗೆ ನಮನ ಸಲ್ಲಿಸಲಿದ್ದಾರೆ.
ಛತ್ತೀಸ್ಗಢ ಪ್ರವಾಸ: ಅಭಿವೃದ್ಧಿ ಯೋಜನೆಗಳ ಚಾಲನೆ
ಮಾರ್ಚ್ 30ನೇ ತಾರೀಖಿನಲ್ಲಿಯೇ ಮೋದಿ ಛತ್ತೀಸ್ಗಢಕ್ಕೂ ಭೇಟಿ ನೀಡಲಿದ್ದು, ವಿದ್ಯುತ್ ಲಭ್ಯತೆ ಹೆಚ್ಚಿಸುವ ಗೃಹಜೋಡಣೆ ಯೋಜನೆ, ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.