spot_img

ಆರ್‌ಎಸ್‌ಎಸ್ ಕಚೇರಿಗೆ ಮೋದಿ ಭೇಟಿ: ರಾಜಕೀಯ ಅಂಗಳದಲ್ಲಿ ಹೊಸ ಚರ್ಚೆ

Date:

ನಾಗ್ಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಮೊದಲ ಬಾರಿಗೆ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಗೆ (ಮಾರ್ಚ್ 30, ರವಿವಾರ) ಭೇಟಿ ನೀಡಿದರು. ಈ ವೇಳೆ ಆರ್‌ಎಸ್‌ಎಸ್ ಸಂಸ್ಥಾಪಕ ನಾಯಕರು ಕೇಶವ ಬಲಿರಾಮ್ ಹೆಡ್ಗೇವಾರ್ ಮತ್ತು ಎಂ.ಎಸ್. ಗೋಲ್ವಾಲ್ಕರ್ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು.

ಮೋದಿ-ಭಾಗವತ್ ಗುಪ್ತಚರ್ಚೆ
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ಮೋದಿ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಮಾಧವ ನೇತ್ರಾಲಯ ಎಂಬ ಕಣ್ಣಿನ ಆಸ್ಪತ್ರೆಗೆ ಅಡಿಪಾಯ ಹಾಕಿದರು. ಆದರೆ, ಈ ಭೇಟಿಯ ಹಿಂದೆ ರಾಜಕೀಯ ಸಮಾಲೋಚನೆಯೂ ನಡೆದಿರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ.

ಭಿನ್ನಾಭಿಪ್ರಾಯ ನಿವಾರಣೆಗೆ ಮೋದಿ ಭೇಟಿ?
ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಸಂಬಂಧಗಳು ಕಳೆದ ಕೆಲ ತಿಂಗಳಿನಿಂದ ಶಿಥಿಲಗೊಂಡಿದ್ದವು. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ “ಬಿಜೆಪಿಗೆ ಆರ್‌ಎಸ್‌ಎಸ್ ಸಹಾಯದ ಅಗತ್ಯವಿಲ್ಲ, ಪಕ್ಷ ಸ್ವಾವಲಂಬಿ” ಎಂಬ ಜೆ.ಪಿ. ನಡ್ಡಾ ಅವರ ಹೇಳಿಕೆ ಬಳಿಕ ಸಂಘ-ಪಕ್ಷ ನಡುವಿನ ದೂರ ಹೆಚ್ಚಾಗಿತ್ತು. ಆರ್‌ಎಸ್‌ಎಸ್ ಈ ಹೇಳಿಕೆಯಿಂದ ಅಸಮಾಧಾನಗೊಂಡು ಮಣಿಪುರ ಘಟನೆ, ಕೇಂದ್ರ ಸರ್ಕಾರದ ಕಾರ್ಯವೈಖರಿ ಕುರಿತು ಟೀಕಿಸಿತ್ತು.

ಬಿಜೆಪಿ-ಆರ್‌ಎಸ್‌ಎಸ್ ಸಂಬಂಧ ಪುನಃ ಬಲವರ್ಧನೆ?
ಲೋಕಸಭಾ ಚುನಾವಣೆಯಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ, ಸರ್ಕಾರ ರಚಿಸಲು ಮೈತ್ರಿ ಪಕ್ಷಗಳ ಅವಲಂಬನೆಯಾಗಿತ್ತು. ಈ ಹಿನ್ನೆಲೆಯಲ್ಲಿ, ಮೋದಿ-ಭಾಗವತ್ ಭೇಟಿಯು ಪಕ್ಷ-ಸಂಘದ ಸಂಬಂಧ ಪುನಃ ಬಲಪಡಿಸುವ ಪ್ರಯತ್ನವೆಂದು ಅಂದಾಜಿಸಲಾಗಿದೆ. ಇದಲ್ಲದೆ, ಬಿಜೆಪಿಯ ಹೊಸ ರಾಷ್ಟ್ರಾಧ್ಯಕ್ಷ ಆಯ್ಕೆ, ಭವಿಷ್ಯದ ವಿಧಾನಸಭಾ ಚುನಾವಣಾ ತಂತ್ರಗಳ ಬಗ್ಗೆ ಸಮಾಲೋಚನೆ ನಡೆದಿರಬಹುದು ಎನ್ನಲಾಗುತ್ತಿದೆ.

ಐತಿಹಾಸಿಕ ಭೇಟಿ ಎಂದು ನಾಯಕರ ಪ್ರತಿಕ್ರಿಯೆ
ಮೋದಿ ಅವರ ಈ ಭೇಟಿಯನ್ನು ಹಲವಾರು ರಾಜಕೀಯ ನಾಯಕರೂ ಐತಿಹಾಸಿಕ ಎಂದು ಕರೆದಿದ್ದಾರೆ. ಇದರಿಂದ ಸಂಘ-ಪಕ್ಷದ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ಕಳುಹಿಸಲು ಬಿಜೆಪಿ ಯತ್ನಿಸುತ್ತಿದೆ ಎನ್ನಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಂತಿಯುತ ಬಕ್ರೀದ್‌ಗೆ ಮುನ್ನೆಚ್ಚರಿಕೆ ಕ್ರಮ: ಅನಧಿಕೃತ ಜಾನುವಾರು ವಧೆ ಹಾಗೂ ಸಾಗಾಣಿಕೆಗೆ ಕಡಿವಾಣ – ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಬರುವ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಜಾನುವಾರುಗಳ ಅನಧಿಕೃತ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಐಪಿಎಲ್ ಗೆಲುವಿಗೆ ದೇವರ ಆಶೀರ್ವಾದ? ವಿರಾಟ್-ಅನುಷ್ಕಾ ಭಕ್ತಿಯ ಹಿನ್ನಲೆ ಇದೀಗ ಚರ್ಚೆಗೆ ಕಾರಣ

ಐಪಿಎಲ್ ಟ್ರೋಫಿ ಗೆದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಭಾವುಕರಾದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಜೋಡಿ ಪಂದ್ಯಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದ ವಿಚಾರವೂ ಇದೀಗ ಮತ್ತೆ ಬೆಳಕಿಗೆ ಬಂದಿದೆ.

ಆರ್‌ಸಿಬಿ ಅಭಿಮಾನಿ ಮೂಲ್ಕಿ ಮೂಲದ ಅಕ್ಷತಾ ಕಾಲ್ತುಳಿತದಿಂದ ಸಾವು: ಟೀಶರ್ಟ್‌ನಿಂದ ಗುರುತು ಹಚ್ಚಿದ ಪತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.