ಮೂಡುಬಿದಿರೆ ತುಳುನಿಡ ಸಿರಿ ಮದಿಪು 2026 ಸಂಭ್ರಮ

Date:

spot_img

ಮೂಡುಬಿದಿರೆ: ವಿದ್ಯಾಥಿ೯ಗಳಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಬಗೆಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಮೂಡುಬಿದಿರೆಯ ಶ್ರೀ ಮಹಾವೀರ ಪ್ರಥಮ ದಜೆ೯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ “ತುಳುನಿಡ ಸಿರಿ ಮದಿಪು-2026” ಸಾಂಸ್ಕೃತಿಕ ಸಡಗರ ಅದ್ಧೂರಿಯಾಗಿ ಜರುಗಿತು. ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕಾಲೇಜಿನ ಹಳೆ ವಿದ್ಯಾಥಿ೯ ಸಂಘದ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾಯ೯ಕ್ರಮವನ್ನು ಆಯೋಜಿಸಲಾಗಿತ್ತು.

ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು, ಶೈಕ್ಷಣಿಕ ವಲಯದಲ್ಲಿ ತುಳು ಭಾಷೆಗೆ ಮನ್ನಣೆ ಸಿಗುವಲ್ಲಿ ಮಾಜಿ ಸಿಎಂ ವೀರಪ್ಪ ಮೊಯಿಲಿ ಅವರ ಕೊಡುಗೆ ಅಪಾರ ಎಂದರು. 1994ರಲ್ಲಿ ಅಕಾಡೆಮಿ ಸ್ಥಾಪನೆಯಾದ ನಂತರವಷ್ಟೇ ಶಾಲೆ ಮತ್ತು ಕಾಲೇಜುಗಳ ಆವರಣದೊಳಗೆ ತುಳು ಭಾಷೆ ಅಧಿಕೃತವಾಗಿ ಪ್ರವೇಶ ಪಡೆಯಲು ಸಾಧ್ಯವಾಯಿತು. ಇಂತಹ ಕಾಯ೯ಕ್ರಮಗಳು ಯುವಜನತೆಯಲ್ಲಿ ಸಾಹಿತ್ಯಿಕ ಆಸಕ್ತಿ ಮತ್ತು ಹಾಡುಗಾರಿಕೆಗೆ ಹೊಸ ಚೈತನ್ಯ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಖ್ಯಾತ ನಟ ಅರವಿಂದ ಬೋಳಾರ್ ಅವರು ಮಾತನಾಡಿ, “ತುಳು ಭಾಷೆ ನನ್ನ ಉಸಿರು” ಎಂದು ಭಾವುಕರಾದರು. ವೃತ್ತಿ ಬದುಕಿಗೆ ಇಂಗ್ಲಿಷ್ ಅಗತ್ಯವಿರಬಹುದು, ಆದರೆ ಮನೆಯಲ್ಲಿ ಮತ್ತು ಆಪ್ತರೊಂದಿಗೆ ಮಾತನಾಡುವಾಗ ತುಳುವನ್ನೇ ಬಳಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಯಕ್ಷಗಾನ ಮತ್ತು ರಂಗಭೂಮಿಯಂತಹ ಕಲೆಗಳು ತುಳುನಾಡಿನ ಪರಂಪರೆಯನ್ನು ಇಂದಿಗೂ ಜೀವಂತವಾಗಿರಿಸಿವೆ ಎಂದು ಅವರು ಸ್ಮರಿಸಿದರು.

ಕಾಯ೯ಕ್ರಮದ ಪ್ರಮುಖ ಮುಖ್ಯಾಂಶಗಳು:

  • ವೀರಪ್ಪ ಮೊಯಿಲಿ ಅವರ ದೂರದೃಷ್ಟಿ: 1994ರಲ್ಲಿ ತುಳು ಅಕಾಡೆಮಿ ಸ್ಥಾಪನೆಯಾದ ಬಳಿಕ ಶಿಕ್ಷಣ ಸಂಸ್ಥೆಗಳಲ್ಲಿ ತುಳು ಭಾಷೆಗೆ ಹೆಚ್ಚಿನ ಗೌರವ ದೊರೆಯುತ್ತಿದೆ.
  • ಅರವಿಂದ ಬೋಳಾರ್ ಸಲಹೆ: ಉದ್ಯೋಗಕ್ಕಾಗಿ ಇಂಗ್ಲಿಷ್ ಕಲಿಯಿರಿ, ಆದರೆ ಮಾತೃಭಾಷೆ ತುಳುವನ್ನು ಮನೆಯೊಳಗೆ ಉಳಿಸಿ ಬೆಳೆಸಿ.
  • ಕಲಾ ಪ್ರಕಾರಗಳ ಸಂರಕ್ಷಣೆ: ಯಕ್ಷಗಾನ ಮತ್ತು ಭರತನಾಟ್ಯದಂತಹ ದೈವೀಕ ಕಲೆಗಳ ಮೂಲ ಸ್ವರೂಪಕ್ಕೆ ಧಕ್ಕೆ ತರದಂತೆ ಯುವಜನತೆ ಜಾಗ್ರತೆ ವಹಿಸಬೇಕು.
  • ಗೌರವ ಸಮಾ೯ರ್ಪಣೆ: ಜಾನಪದ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಕಲಾವಿದ ವೆಂಕಟೇಶ ಬಂಗೇರಾ ಅವರಿಗೆ ಸನ್ಮಾನ ಮಾಡಲಾಯಿತು.

ದೈವ-ದೇವರುಗಳ ಹೆಸರಿನಲ್ಲಿ ನಡೆಯುವ ಕಲೆಗಳನ್ನು ವಿಕೃತಗೊಳಿಸದಂತೆ ಮನವಿ ಮಾಡಿದ ಸನ್ಮಾನಿತ ವೆಂಕಟೇಶ ಬಂಗೇರಾ ಅವರು, ಸಂಸ್ಕೃತಿಯನ್ನು ಮೂಲ ರೂಪದಲ್ಲಿಯೇ ಮುಂದಿನ ಪೀಳಿಗೆಗೆ ದಾಟಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಅವರ ನೇತೃತ್ವದಲ್ಲಿ ನಡೆದ ಈ ಸಮಾರಂಭದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.