ಸೈನ್ಯದ ಅವಹೇಳನ: ಬಿಜೆಪಿ ಸಚಿವರ ವಜಾ ಬೇಡಿಕೆ!

Date:

spot_img

ಭಾರತೀಯ ಸೇನೆಯ ಅತ್ಯುನ್ನತ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿಯವರನ್ನು ಉಗ್ರವಾದಿಗಳ ಸಹೋದರಿ ಎಂದ ಮದ್ಯಪ್ರದೇಶದ ಬಿಜೆಪಿ ಸಚಿವನ ಹೇಳಿಕೆಯ ವಿರುದ್ದ ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನುಬಾಸ್ಕರ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶವೇ ಗೌರವಿಸುವ ಸೈನ್ಯದ ಅ‌ತ್ಯುನ್ನತ ಸ್ಥಾನದಲ್ಲಿರುವ ಮಹಿಳಾ ಸೇನಾ ಮುಖ್ಯಸ್ಥೆಯ ವಿರುದ್ದ ಇಂತಹ ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಬಿಜೆಪಿ ಸಚಿವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ. ಭಾರತೀಯ ಸೇನಯು ಧರ್ಮ ನಿರಪೇಕ್ಷವಾಗಿ ದೇಶ ರಕ್ಷಣೆಯ ಕೆಲಸದಲ್ಲಿ ತೊಡಗಿದ್ದು ಶಿಸ್ತು ಸಂಯಮ ಮತ್ತು ಸೇನಾ ನ್ಯಾಯಕ್ಕೆ ವಿಶ್ವದಲ್ಲಿಯೇ ಅತ್ಯುತ್ತಮ ಹೆಸರು ಪಡೆದುಕೊಂಡಿದೆ. ಸೇನೆಯಲ್ಲಿ ಅನೇಕ ಜಾತಿ, ಸಮುದಾಯ, ಧರ್ಮ , ಪ್ರಾಂತವಾರು ಭೇದಭಾವ ಇಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ದೇಶ ರಕ್ಷಣೆಯ ಕರ್ತವ್ಯ ನಿಭಾಯಿಸುತ್ತಿದ್ದಾರೆ, ಇಂತಾ ಸೇನೆಗೆ ಈ ಬಿಜೆಪಿ ನಾಯಕರು ಅವಹೇಳನಕಾರಿಯಾಗಿ ಮಾತನಾಡುವುದು ಅವರ ಕೊಳಕು ಮನಸ್ಥಿತಿಗೆ ಸಾಕ್ಷಿಯಾಗಿದೆ.

ಸ್ವತಃ ನಾನು ಸೇನೆಯ ಮಾಜಿ ಯೋಧನ ಪತ್ನಿಯಾಗಿ ಸೇನೆಯ ಯೋಧರ ಸುಖ ಕಷ್ಟಗಳ ಅರಿವು ನನಗಿದೆ. ತನ್ನ ಕುಟುಂಬವನ್ನು ತೊರೆದು ಸಾವಿರಾರು ಕಿಲೋಮೀಟರ್ ದೂರದಲ್ಲಿನ ದೇಶದ ಗಡಿಯಲ್ಲಿ ಜೀವದ ಹಂಗು ತೊರೆದು ದೇಶಕ್ಕಾಗಿ ಹೋರಾಡುವ ಸೈನ್ಯದ ಬಗ್ಗೆ ಬಿಜೆಪಿ ನಾಯಕ ಕೀಳುಮಟ್ಟದಲ್ಲಿ ನಾಲಿಗೆ ಹರಿಬಿಟ್ಟಿರುವುದು ಇದು ದೇಶದ ಸೈನ್ಯಕ್ಕೆ ಮಾಡಿದ ಅವಮಾನವಾಗಿದೆ.

ಗಾಂಧಿ ನೆಹರು ಅಂಬೇಡ್ಕರ್ ಮುಂತಾದ ರಾಷ್ಟ್ರ ನಾಯಕರನ್ನು ನಿರಂತರವಾಗಿ ಅವಹೇಳನ ಮಾಡುತ್ತಿದ್ದ ಬಿಜೆಪಿ ಈಗ ದೇಶದ ಸೈನಿಕರನ್ನೂ ಅವಹೇಳನ ಮಾಡುತ್ತಿದೆ, ಇವರಿಗೆ ದೇಶದ ಬಗ್ಗೆಯಾಗಲಿ ದೇಶ ಕಾಯುವ ಸೈನಿಕರ ಬಗ್ಗೆಯಾಗಲಿ ಯಾವುದೇ ಭಾವನೆಗಳು ಇಲ್ಲ, ಬಿಜೆಪಿಯವರಿಗೆ ಬೇಕಿರುವುದು ಕೇವಲ ಹಿಂದು ಮುಸ್ಲಿಮ್ ಹೆಸರಿನಿಂದ ದೇಶದ ವಿಭಜನೆ ಮಾತ್ರಾ. ಮಧ್ಯಪ್ರದೇಶದ ಸಚಿವನ ಹೇಳಿಕೆಯು ಇದು ಸಮಸ್ತ ಬಿಜೆಪಿ ಪಕ್ಷದವರ ಮನಸ್ಥಿತಿಯಾಗಿದೆ, ಬಿಜೆಪಿಯ ರಾಷ್ಟ್ರ ವಿರೋದಿ ಮನಸ್ಥಿತಿಯನ್ನು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಪರಿಗಣಿಸಿ ಖಂಡಿಸುತ್ತದೆ ಎಂದು ಕಾರ್ಕಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನುಭಾಸ್ಕರ ಪೂಜಾರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ‌.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.