spot_img

ಮೂಡಬಿದ್ರೆಯ ಬಸ್ಸಿನಲ್ಲಿ ಕಾಮುಕನಿಂದ ಹೆಣ್ಣು ಮಕ್ಕಳಿಗೆ ಕಿರುಕುಳ ಸುಮೋಟ ಕೇಸು ದಾಖಲಿಸುವಂತೆ ಆಗ್ರಹ : ಶ್ರೀಮತಿ ರಮಿತಾ ಶೈಲೇಂದ್ರ

Date:

spot_img
ramita11

ಮೂಡಬಿದ್ರೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರೂ ಪೊಲೀಸ್ ಇಲಾಖೆ ಮೌನ ವಹಿಸಿದೆ , ಸದ್ರಿ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆತನನ್ನು ಠಾಣೆಗೆ ಕರೆಯಿಸಿ ವಿಚಾರಿಸಲಾಗಿದ್ದು , ಆತನಿಗೂ ಸಹ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇರುವುದಿಲ್ಲ. ಆದುದರಿಂದ ಸಂತ್ರಸ್ತ ಯುವತಿ ಅಥವಾ ಈ ವ್ಯಕ್ತಿಯಿಂದ ತೊಂದರೆಗೊಳಗಾದ ಯಾರಾದರೂ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಿದರೆ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದ್ರೆ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಸಂದೇಶ್ P G ಹೇಳಿಕೆ ನೀಡಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ತೀವ್ರವಾಗಿ ಹಿಂದೂ ಸಮಾಜದ ಮಾತೃ ಶಕ್ತಿ ವಿರೋಧಿಸುತ್ತದೆ. ಆಕೆ ಯಾರೇ ಆಗಿರಲಿ ಹೆಣ್ಣು ಎಂಬುವಂತಹ ಪರಿಜ್ಞಾನ ನಮಗಿದೆ. ಅವಳಿಗೆ ಕಿರುಕುಳ ನೀಡುವುದು ಕಂಡುಬಂದರೂ ಕೂಡ ನಿಮಗೆ ಸುಮೋಟ ಕೇಸು ದಾಖಲಿಸಲು ಯಾವ ದೂರಿನ ಅಗತ್ಯವಿಲ್ಲವೆಂದು ಭಾವಿಸುತ್ತೇನೆ, ಸಮಾಜದಲ್ಲಿ ಇಂಥ ಅನೈತಿಕತೆ ಎದ್ದು ಕಂಡಾಗ ಸಮಾಜವನ್ನು ಕಾಪಾಡುವಂತಹ ಜವಾಬ್ದಾರಿ ಪೊಲೀಸ್ ಇಲಾಖೆಗೆ ಇರುತ್ತದೆ. ಹಾಗಾಗಿ ಇದನ್ನು ತಳ್ಳಿ ಹಾಕದೆ ಸುಮೋಟ ಕೇಸು ದಾಖಲಿಸಬೇಕೆಂದು ತಮ್ಮಲ್ಲಿ ಮಹಿಳೆಯರ ಪರವಾಗಿ ಆಗ್ರಹ ಪಡಿಸುತ್ತೇನೆ . ಜವಾಬ್ದಾರಿಯುತವಾಗಿ ನೀವು ನಡೆದುಕೊಳ್ಳದೆ ಇದ್ದಲ್ಲಿ ಮಹಿಳಾ ಆಯೋಗದ ಮುಂದೆ ದೂರನ್ನು ನೀಡುತ್ತೇವೆ ಮತ್ತು ಸುಮೋಟ ದೂರನ್ನು ದಾಖಲಿಸದಿದ್ದರೆ ಘಟನೆಯನ್ನು ಖಂಡಿಸಿ ಪ್ರತಿಭಟಿಸಿ ಮಾತೃಶಕ್ತಿಯ ಸಾಮರ್ಥ್ಯವನ್ನು ತೋರಿಸಬೇಕಾಗಬಹುದು ಎಂದು ಸಾಮಾಜಿಕ ಚಿಂತಕಿ ರಮಿತಾ ಶೈಲೇಂದ್ರ ರವರು ಪೊಲೀಸ್ ಇಲಾಖೆಯನ್ನು ಎಚ್ಚರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಧರ್ಮಸ್ಥಳ ಪ್ರಕರಣ : ರಾಜ್ಯ ಮಹಿಳಾ ಆಯೋಗದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಕಮಿಷನರ್ ಗೆ ಪತ್ರ

ರಾಜ್ಯಾದ್ಯಂತ ಗಮನ ಸೆಳೆದಿದ್ದ ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿರುವಾಗಲೇ, ರಾಜ್ಯ ಮಹಿಳಾ ಆಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದಿದೆ.

ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಕಾರಿನಲ್ಲಿ ಅಕ್ರಮ ಗೋ ಸಾಗಾಟ; ಓರ್ವನ ಬಂಧನ

ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣ ಗುರುವಾಯನಕೆರೆಯಲ್ಲಿ ಬೆಳಕಿಗೆ ಬಂದಿದೆ.

ಉಡುಪಿ ಶ್ರೀ ಕೃಷ್ಣಮಠದಲ್ಲಿ ಚಾಂದ್ರ ಶ್ರೀಕೃಷ್ಣಾಷ್ಟಮಿ ಸರಳ ಆಚರಣೆ

ಚಾಂದ್ರ ಶ್ರೀಕೃಷ್ಣಾಷ್ಟಮಿಯ ಅಂಗವಾಗಿ ಇಂದು ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸಾಮೂಹಿಕವಾಗಿ ಶ್ರೀ ಕೃಷ್ಣ ಮಂತ್ರ ಜಪ ಪಠನ ಹಾಗೂ ಭೋಜನ ಪ್ರಸಾದ ವಿತರಣೆಯು ಸರಳವಾಗಿ ನಡೆಯಲಿದೆ.

‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’

79ನೇ ಸ್ವಾತಂತ್ರ್ಯ ದಿನಾಚರಣೆಯ 'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ಆ.14ರಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ 'ತಿರಂಗಾ ದ್ವಿಚಕ್ರ ವಾಹನ ಜಾಥಾ' ನಡೆಯಿತು.