spot_img

ರೈಲಿನಿಂದ ಜಿಗಿದು ಗಾಯಗೊಂಡ ‘ಪ್ಯಾರ್ ಕಾ ಪಂಚನಾಮಾ’ ಖ್ಯಾತಿಯ ನಟಿ ಕರಿಷ್ಮಾ ಶರ್ಮಾ ಆಸ್ಪತ್ರೆಗೆ ದಾಖಲು

Date:

ಮುಂಬೈ: ಖ್ಯಾತ ಬಾಲಿವುಡ್ ನಟಿ ಕರಿಷ್ಮಾ ಶರ್ಮಾ ಅವರು ಚಲಿಸುತ್ತಿರುವ ರೈಲಿನಿಂದ ಇಳಿಯುವ ಸಾಹಸಕ್ಕೆ ಕೈ ಹಾಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ. ಈ ಘಟನೆ ಮುಂಬೈನ ಚರ್ಚ್‌ಗೇಟ್ ರೈಲು ನಿಲ್ದಾಣದ ಬಳಿ ನಡೆದಿದೆ. ಪ್ಯಾರ್ ಕಾ ಪಂಚನಾಮಾ ಮತ್ತು ರಾಗಿಣಿ ಎಂಎಂಎಸ್ ರಿಟರ್ನ್ಸ್ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಕರಿಷ್ಮಾ, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಕುರಿತು ಸ್ವತಃ ನಟಿಯೇ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಸ್ನೇಹಿತರೊಂದಿಗೆ ಚರ್ಚ್‌ಗೇಟ್‌ನಲ್ಲಿ ನಡೆಯಲಿದ್ದ ಶೂಟಿಂಗ್‌ಗೆ ಹೋಗಲು ಕರಿಷ್ಮಾ ಮುಂಬೈ ರೈಲು ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ಅವರು ಸೀರೆ ಧರಿಸಿದ್ದರು. ಲೋಕಲ್ ರೈಲು ಹತ್ತುತ್ತಿರುವಾಗ, ರೈಲು ಚಲಿಸಲು ಆರಂಭಿಸಿತು. ಅವರೊಂದಿಗೆ ಇದ್ದ ಗೆಳತಿಯರು ರೈಲು ಹತ್ತಲು ಸಾಧ್ಯವಾಗಲಿಲ್ಲ. ಇದನ್ನು ನೋಡಿದ ಕರಿಷ್ಮಾ, ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು, ತಲೆ, ಬೆನ್ನು ಮತ್ತು ಕೈಗಳಿಗೆ ಗಾಯಗಳಾಗಿವೆ.

ಕೂಡಲೇ ಅವರ ಸ್ನೇಹಿತರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ನಟಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಲೆಗೆ ಗಂಭೀರ ಗಾಯಗಳಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಎಂಆರ್‌ಐ ಸ್ಕ್ಯಾನಿಂಗ್ ಮಾಡಿಸಲಾಗಿದೆ. ಈ ವರದಿಯನ್ನು ನೋಡಿಕೊಂಡು ಮುಂದಿನ ಚಿಕಿತ್ಸೆಯ ಬಗ್ಗೆ ನಿರ್ಧರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.

ಸಿನಿಮಾ ಮಾತ್ರವಲ್ಲದೆ, ಕರಿಷ್ಮಾ ಶರ್ಮಾ ಅವರು ಪವಿತ್ರ ರಿಶ್ತಾ, ಯೇ ಹೈ ಮೊಹಬ್ಬತೇನ್ ಮತ್ತು ಪ್ಯಾರ್ ತುನೆ ಕ್ಯಾ ಕಿಯಾ ಮುಂತಾದ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿ ಜನರ ಮೆಚ್ಚುಗೆ ಗಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿಗೆ ಚಾಕು ಇರಿತ; ಬ್ರಹ್ಮಾವರದಲ್ಲಿ ಭೀಕರ ಘಟನೆ

ಪ್ರೀತಿ ಹಾಗೂ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣಕ್ಕಾಗಿ ಯುವತಿಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.

ಬ್ಯಾಟ್ ಹಿಡಿದ ‘ಹಿಟ್‌ಮ್ಯಾನ್’: ಸಾಮಾಜಿಕ ಜಾಲತಾಣದಲ್ಲಿ ಅಭ್ಯಾಸದ ವಿಡಿಯೋ ಹಂಚಿಕೊಂಡ ರೋಹಿತ್

ನಿವೃತ್ತಿಯ ವದಂತಿಗಳ ಬೆನ್ನಲ್ಲೇ ಭಾರತದ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅವರು ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳಿದ್ದಾರೆ.

ಹಮಾಸ್‌-ಇಸ್ರೇಲ್ ಸಂಘರ್ಷ: ಗಾಜಾದಲ್ಲಿ ಆಹಾರ, ಹಣವಿಲ್ಲದೆ ಸ್ಥಳಾಂತರಕ್ಕೆ ಪರದಾಡುತ್ತಿರುವ ನಾಗರಿಕರು

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದ ತತ್ತರಿಸಿರುವ ಗಾಜಾದಲ್ಲಿ, ನಾಗರಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಪರದಾಡುತ್ತಿದ್ದಾರೆ.

ರಾಜಕೀಯ ಅಂತ್ಯದ ಭವಿಷ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾಯಿ ಚಾಮುಂಡಿ ಶಾಪ, ಅಧಿಕಾರ ಪತನ ನಿಶ್ಚಿತ ಎಂದ ಯತ್ನಾಳ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವು ತಾಯಿ ಚಾಮುಂಡೇಶ್ವರಿಯ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.