spot_img

ನೂತನ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ರಾಜಕೀಯ ಅಪಪ್ರಚಾರಗಳಿಗೆ ಕಿವಿಗೊಟ್ಟು ಮುಸ್ಲಿಂ ಸಮುದಾಯ ಭಯಪಡುವ ಅವಶ್ಯಕತೆ ಇಲ್ಲ: ಬಿಜೆಪಿ ಮುಖಂಡ ಸಲೀಂ ಅಂಬಾಗಿಲು

Date:

spot_img

ಈಗಾಗಲೇ ರಾಷ್ಟ್ರ ವ್ಯಾಪಿ ಕುತೂಹಲಕ್ಕೆ ಒಳಗಾಗಿ, ಚರ್ಚೆಯಾಗಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ನೂತನ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾಗಿದೆ. ನೂತನ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ರಾಜಕೀಯ ಅಪಪ್ರಚಾರಗಳಿಗೆ ಕಿವಿಗೊಟ್ಟು ಮುಸ್ಲಿಂ ಸಮುದಾಯ ಭಯಪಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಮುಖಂಡ, ರಾಜ್ಯ ಹಜ್ಜ್ ಸಮಿತಿ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಎಂ.ಸಲೀಂ ಅಂಬಾಗಿಲು ತಿಳಿಸಿದ್ದಾರೆ.

ಈ ಹಿಂದೆಯೇ ನಮ್ಮ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದ ಸಂಧರ್ಭದಲ್ಲಿ ಅಂದಿನ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಕುಳಗಳು ಮತ್ತು ಕೆಲವೊಂದು ಸರಕಾರಿ ಸಂಸ್ಥೆಗಳಿಂದ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ಅನಧಿಕೃತ ಪರಭಾರೆಯ ಬಗ್ಗೆ ಮಂಡಿಸಿದ್ದ ಪರಿಣಾಮಕಾರಿ ವರದಿಯನ್ನು ಅಂದಿನ ಬಿಜೆಪಿ ಸರಕಾರ ಸದನದಲ್ಲಿ ಮಂಡಿಸಲು ಮುಂದಾಗಿತ್ತು. ಅದೇ ಸಮಯದಲ್ಲಿ ಸರಕಾರವು ಆಡಳಿತ ವಂಚಿತವಾಗಿ, ಬಳಿಕ ರಾಜ್ಯದ ಅಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರಕಾರವು ತನ್ನ ಶಾಸಕರು, ಸಚಿವರು ಹಾಗೂ ಮುಖಂಡರುಗಳಿಂದಲೇ ಆಸ್ತಿ ಲೂಟಿಯಾಗಿರುವುದನ್ನು ಮುಚ್ಚಿಡಲು ಕುತಂತ್ರ ನಡೆಸಿ ಸದ್ರಿ ವರದಿಯನ್ನೇ ಕಸದ ಬುಟ್ಟಿಗೆಸೆಯಿತು.

ಈಗಾಗಲೇ ಸಂಸತ್ತಿನ ಅಧಿವೇಶನದಲ್ಲಿ ಮಸೂದೆ ಮಂಡನೆಯ ಸಮಯದಲ್ಲಿ ಈ ವರದಿಯ ಗಂಭೀರತೆಯ ಬಗ್ಗೆ ಚರ್ಚೆಯಾಗಿರುವುದು ಕೂಡ ಗಮನಾರ್ಹ ಅಂಶವಾಗಿರುತ್ತದೆ. ಈ ಎಲ್ಲ ಬೆಳವಣಿಗೆಗಳ ಬಳಿಕ ತುಷ್ಟೀಕರಣ ನೀತಿಯನ್ನು ಅನುಸರಿಸುತ್ತಿರುವ ವಿರೋಧ ಪಕ್ಷಗಳು ಹಾಗೂ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಈ ಮಸೂದೆ ಮುಸ್ಲಿಂ ವಿರೋದಿ ಎಂದು ಬೊಬ್ಬಿರಿತ್ತಿರುವುದು ಕಂಡುಬರುತ್ತಿದೆ.

ಅನಾದಿ ಕಾಲದಿಂದಲೂ ನಮ್ಮ ಸಮುದಾಯದ ಹಿರಿಯರು, ಶ್ರೀಮಂತ ವರ್ಗದ ಆಸ್ತಿವಂತರು, ತ್ಯಾಗಜೀವಿಗಳು ಬಡವರ ಬಗ್ಗೆ ಕಾಳಜಿ ಹೊಂದಿ ತಮ್ಮ ಒಡೆತನದ ಅಸ್ತಿಗಳನ್ನು ವಕ್ಫ್ ಮಾಡಿ ಪವಿತ್ರವಾದ ಉದ್ದೇಶವನ್ನು ಇರಿಸಿಕೊಂಡು ಅದನ್ನು ಅಲ್ಲಾಹನ ಆಸ್ತಿ ಎಂದು ಘೋಷಿಸಿರುವುದು ಮುಸ್ಲಿಂ ಸಮುದಾಯದ ಒಳಿತಿಗಾಗಿ ಎಂಬುವುದು ನಿಸ್ಸಂದೇಹ ಅಲ್ಲವೆ? ನಮ್ಮ ಸಮುದಾಯದ ಶ್ರೇಯೋಭಿವೃದ್ದಿ ಹಾಗೂ ಬಡ ವರ್ಗದ ಮುಸ್ಲಿಮರ ಕಲ್ಯಾಣಕ್ಕಾಗಿ ದುಡಿಯಬೇಕಾಗಿದ್ದ ಸ್ಥಳೀಯ, ರಾಜ್ಯ, ರಾಷ್ಟ್ರೀಯ ವಕ್ಫ್ ಸಂಸ್ಥೆಗಳು, ಮುಸ್ಲಿಂ ಪರ ಎನ್ನುವ ಸಂಘಟನೆಗಳು, ಅದೆಷ್ಟು ರಾಜಕೀಯ ಪಕ್ಷಗಳು ವಕ್ಫ್ ಆಸ್ತಿಗಳನ್ನು ಉಪಯೋಗಿಸಿ ಮುಸ್ಲಿಂ ಸಮುದಾಯದ ಕಲ್ಯಾಣಕ್ಕಾಗಿ ಶ್ರಮಿಸಿದೆ ಎನ್ನುವುದು ಇನ್ನು ಕೂಡ ಯಕ್ಷಪ್ರಶ್ನೆಯಾಗಿ ಉಳಿದಿದೆ ಅಲ್ಲವೆ?

ಇಂತಹ ಸಂಧರ್ಭದಲ್ಲಿ ಈ ಎಲ್ಲಾ ಒಳಿತು ಕೆಡುಕುಗಳ ಬಗ್ಗೆ ಚಿಂತಿಸಿ ಕೇಂದ್ರದಲ್ಲಿ ಬಿಜೆಪಿ ಸರಕಾರವು ವಕ್ಫ್ ನೂತನ ತಿದ್ದುಪಡಿ ಮಸೂದೆ ಜಾರಿಗೊಳಿಸಿರುವ ಬಗ್ಗೆ ಸತ್ಯಾಸತ್ಯತೆಯನ್ನು ಅರಿತುಕೊಂಡು ಇನ್ನಾದರು ಅದರಿಂದಾಗಿ ಯಾವುದೇ ಸ್ಥಳೀಯ ರಾಜ್ಯ, ರಾಷ್ಟ್ರೀಯ ವಕ್ಫ್ ಸಂಸ್ಥೆ ಗಳು, ಆಡಳಿತಾತ್ಮಕ ಸಂಸ್ಥೆಗಳು ಅಥವಾ ಇನ್ನಿತರ ಸರಕಾರಗಳು ಎಚ್ಚೆತ್ತುಕೊಂಡು ಆ ಪವಿತ್ರಾತ್ಮರ, ತ್ಯಾಗಜೀವಿಗಳ ಪವಿತ್ರವಾದ ಕೊಡುಗೆಯನ್ನು ತಮ್ಮ ಸ್ವಯಂ ಸ್ವಾರ್ಥದ ಬಯಕೆಗಳಿಗೆ ಬಳಸಿ ದುರುಪಯೋಗಪಡಿಸಿ ಶಾಪಕ್ಕೆ ಒಳಗಾಗುವುದರ ಬದಲಿಗೆ ಮುಸ್ಲಿಂ ಸಮುದಾಯದ ಬಡವರ ಏಳಿಗೆಗಾಗಿ ಉಪಯೋಗಿಸುವ ಪುಣ್ಯ ಕೆಲಸಕ್ಕೆ ಮುಂದಾಗಲಿ ಎಂಬುವುದೇ ಸಮುದಾಯದ ಪಾಲಿನ ಬಡವರ ಹಕ್ಕಿನ ಕೂಗಾಗಿರುತ್ತದೆ ಎಂದು ಎಂ.ಸಲೀಂ ಅಂಬಾಗಿಲು ಪತ್ರಿಕಾ ಪ್ರಕಟಣೆಯ ಮೂಲಕ ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.