spot_img

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಶ್ರೀ ಪ್ರೀತಂ ಶೆಟ್ಟಿ ಸ್ಮರಣಾರ್ಥ ಮೇ 3ರಂದು ಮುನಿಯಾಲಿನಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ

Date:

spot_img

ಕಾರ್ಕಳ ಮಾರ್ಚ್.18: ಶ್ರೀ ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ (ರಿ ) ಮುಟ್ಲುಪಾಡಿ ಇವರ ವತಿಯಿಂದ ಮುನಿಯಾಲು ಗ್ರಾಮದ ಹೆಮ್ಮೆಯ ಯುವಕ ಹಾಗೂ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಶ್ರೀ ಪ್ರೀತಂ ಶೆಟ್ಟಿ ಸ್ಮರಣಾರ್ಥವಾಗಿ ಕಾರ್ಕಳ ವಿಧಾನಸಭಾ ವ್ಯಾಪ್ತಿ ಹಾಗೂ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಮೇ 3, 2025 ರಂದು ಮುನಿಯಾಲಿನ ವೀರ ಸಾವರ್ಕರ್ ಮೈದಾನದಲ್ಲಿ ಆಯೋಜಿಸಲಾಗಿದೆ.

ಕಾರ್ಕಳ ವಿಧಾನ ಸಭಾ ವ್ಯಾಪ್ತಿ ಪಂದ್ಯಾಟವು ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಲಿದ್ದು, ಸಂಜೆ 6.30ಕ್ಕೆ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ.ಈ ಟೂರ್ನಿಯಲ್ಲಿ ಪ್ರೋ ಕಬಡ್ಡಿ ಆಟಗಾರರನ್ನು ಒಳಗೊಂಡ 8 ತಂಡಗಳು ಭಾಗವಹಿಸಲಿದ್ದು, ಮಾಜಿ ಕ್ರಿಕೆಟಿಗರು, ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ತಾರೆಗಳು ವಿಶೇಷ ಆಕರ್ಷಣೆಯಾಗಿ ಪಾಲ್ಗೊಳ್ಳಲಿದ್ದಾರೆ.10 ಸಾವಿರಕ್ಕೂ ಹೆಚ್ಚು ಜನರಿಗೆ ವಿಶಾಲ ಗ್ಯಾಲರಿ ವ್ಯವಸ್ಥೆಯೂ ಮಾಡಲಾಗಿದೆ.

ಪ್ರಶಸ್ತಿಗಳ ವಿವರ
ಕಾರ್ಕಳ ವಿಧಾನ ಸಭಾ ವ್ಯಾಪ್ತಿ
ಪ್ರಥಮ – 25000
ದ್ವಿತೀಯ-15000
ತೃತೀಯ – 10000
ಚತುರ್ಥ – 10000

ರಾಷ್ಟ್ರೀಯ ಮಟ್ಟ
ಪ್ರಥಮ – 100000
ದ್ವಿತೀಯ-75000
ತೃತೀಯ – 50000
ಚತುರ್ಥ – 50000

ಉಳಿದ 4 ತಂಡಗಳಿಗೆ ತಲಾ 25000 ದಂತೆ ಸಮಾಧಾನಕರ ಬಹುಮಾನವನ್ನು ನೀಡಲಾಗುವುದು ಎಂದು ಇಂದು ನಡೆದ ಪತ್ರಿಕಾ ಘೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಪತ್ರಿಕಾ ಘೋಷ್ಠಿಯಲ್ಲಿ ಶ್ರೀ ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ (ರಿ ) ಮುಟ್ಲುಪಾಡಿ ಇದರ ಗೌರವಾಧ್ಯಕ್ಷರಾದ ಗಿರೀಶ್ ಶೆಟ್ಟಿ ತೆಳ್ಳಾರು, ಅಧ್ಯಕ್ಷರಾದ ಸುನಿಲ್ ಹೆಗ್ಡೆ, ಕೋಶಾಧಿಕಾರಿಗಳಾದ ಸುದೀಪ್ ಅಜಿಲ, ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರರಾದ ಜಗದೀಶ್ ಕುಂಬ್ಳೆ , ಸುಹಾಸ್ ಶೆಟ್ಟಿ ಮುಟ್ಲುಪಾಡಿ, ಹರೀಶ್ ಶೆಟ್ಟಿ ಪಡುಕುಡೂರು ಹಾಗೂ ಗೋಪಿನಾಥ್ ಭಟ್ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 9632529520

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‌ಪೋ 1.0ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್‌ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ರೋಬೋಟ್ ‘ಶುವಾಂಗ್ ಶುವಾಂಗ್’ ಪದವಿ ಪಡೆದ ವಿಚಿತ್ರ ಘಟನೆ: ಚೀನಾದಲ್ಲಿ ತಾಂತ್ರಿಕ ಕ್ರಾಂತಿ!

ಚೀನಾದ ಫುಜಿಯನ್ ಪ್ರಾಂತ್ಯದ ಶುವಾನ್ಶಿ ಹೈಸ್ಕೂಲ್‌ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭವೊಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗಿದೆ. "ಶುವಾಂಗ್ ಶುವಾಂಗ್" ಹೆಸರಿನ ಮಾನವಾಕಾರದ ರೋಬೋಟ್ ಒಂದು ಸಮಾರಂಭದಲ್ಲಿ ಭಾಗವಹಿಸಿ, ವೇದಿಕೆಗೆ ನಡೆದು, ಶಿಕ್ಷಕರಿಂದ ಕೈಚಲಾವಣೆ ಮೂಲಕ ಪ್ರಮಾಣಪತ್ರ ಸ್ವೀಕರಿಸಿತು.

ಹಲಸಿನ ಹಣ್ಣು ತಿಂದು ಬ್ರೀಥಲೈಸರ್‌ನಲ್ಲಿ ಫೇಲ್: ಕೇರಳದಲ್ಲಿ ಅಚ್ಚರಿಯ ಘಟನೆ!

ಮದ್ಯಪಾನ ಮಾಡದಿದ್ದರೂ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮೂವರು ಬಸ್ ಚಾಲಕರು ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲರಾಗಿ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.

ದಿನ ವಿಶೇಷ – ವಿಶ್ವ ಐವಿಎಫ್ ದಿನ

ಈ ದಿನವು ಸಂತಾನೋತ್ಪತ್ತಿ ವಿಜ್ಞಾನದಲ್ಲಿನ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಬಂಜೆತನದಿಂದ ಬಳಲುತ್ತಿರುವ ಅಸಂಖ್ಯಾತ ದಂಪತಿಗಳಿಗೆ ಆಶಯದ ದಾರಿಯನ್ನು ತೆರೆದ ಐವಿಎಫ್ ತಂತ್ರಜ್ಞಾನದ ಪ್ರಗತಿಯನ್ನು ಸ್ಮರಿಸುತ್ತದೆ