ಪುತ್ರನ ಚೇತರಿಕೆಗೆ ತಿರುಪತಿಯಲ್ಲಿ ಮುಡಿಕೊಟ್ಟು ಹರಕೆ ತೀರಿಸಿದ ಪವನ್ ಕಲ್ಯಾಣ್ ಪತ್ನಿ

Date:

spot_img

ತಿರುಪತಿ: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಪ್ರಿಯ ನಟ ಪವನ್ ಕಲ್ಯಾಣ್ ಅವರ ಪತ್ನಿ ಅನ್ನಾ ಲೆಜ್ಜೆವಾ ಭಾನುವಾರ ರಾತ್ರಿ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ, ಪುತ್ರನ ಚೇತರಿಕೆಗೆ ಹೊತ್ತಿದ್ದ ಹರಕೆಯಂತೆ ಮುಡಿಕೊಟ್ಟು ಹರಕೆ ತೀರಿಸಿಕೊಂಡರು.

ಏಪ್ರಿಲ್ 8ರಂದು ಸಿಂಗಾಪುರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಪುತ್ರ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭ ದೇವರಲ್ಲಿ ಹರಕೆ ಹೊತ್ತಿದ್ದ ಪತ್ನಿ ಲೆಜ್ಜೆವಾ, ಈಗ ಮಗನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ತಿರುಪತಿಗೆ ತೆರಳಿ ಮುಡಿಕೊಟ್ಟು ದೇವರಿಗೆ ಕೃತಜ್ಞತೆ ಸಲ್ಲಿಸಿದರು.

ಭಾನುವಾರ ಪವನ್ ಕಲ್ಯಾಣ್ ಅವರ ಪತ್ನಿ ಮತ್ತು ಪುತ್ರ ಸಿಂಗಾಪುರದಿಂದ ಭಾರತಕ್ಕೆ ಮರಳಿದ್ದು, ಪವನ್ ಕಲ್ಯಾಣ್ ಅವರು ಸರಕಾರಿ ಕಾರ್ಯನಿಮಿತ್ತ ದೇವಸ್ಥಾನಕ್ಕೆ ಭೇಟಿ ನೀಡಲಾಗಲಿಲ್ಲ.ಲೆಜ್ಜೆವಾ ಅವರು ಮಾತ್ರ ಸ್ವತಃ ತಿರುಪತಿಗೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.